Advertisement
ಸುದ್ದಿಗಳು

ಸುರೇಶ್ ರೈ ಸೂಡಿಮುಳ್ಳು ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Share

ಸವಣೂರು : ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ, ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ 2019-20 ನೇ ಸಾಲಿನ ರಾಷ್ಟ್ರೀಯ ಯುವ ಸಮ್ಮಾನ್ ಪ್ರಶಸ್ತಿಗೆ ಭಾಜನರಾದ ಸುರೇಶ್ ರೈ ಸೂಡಿಮುಳ್ಳು ಅವರು 2019-20ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಜ.26ರಂದು ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆಯಲಿದೆ. ನ.1 ರಂದು ಕನ್ನಡ ರಾಜ್ಯೋತ್ಸವದಂದು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಪ್ರಶಸ್ತಿ ಘೋಷಣೆ ಹಾಗೂ ಪ್ರದಾನ ಸಮಾರಂಭ ನಡೆದಿರಲಿಲ್ಲ. ಜ.25ರಂದು ಜಿಲ್ಲಾಧಿಕಾರಿ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ ಮಾಡಿದರು.

ಸುರೇಶ್ ರೈ ಸೂಡಿಮುಳ್ಳು ಅವರು 2004-05 ನೇ ಸಾಲಿನಲ್ಲಿ ಸವಣೂರು ಯುವಕ ಮಂಡಲದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 527 ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿ ರಾಜ್ಯದ ಗಮನಸೆಳೆದಿದ್ದರು. ಈ ಅವಧಿಯಲ್ಲಿ ಸವಣೂರು ಯುವಕ ಮಂಡಲಕ್ಕೆ ಜಿಲ್ಲಾ ಅತ್ಯುತ್ತಮ ಸಾಂಘಿಕ ಪ್ರಶಸ್ತಿ ಹಾಗೂ ಸುರೇಶ್ ರೈ ಅವರಿಗೆ ವೈಯಕ್ತಿಕ ಜಿಲ್ಲಾ ಯುವ ಪ್ರಶಸ್ತಿ ಮತ್ತು ಯುವಕ ಮಂಡಲಕ್ಕೆ ಕರ್ನಾಟಕ ಸರಕಾರದ ರಾಜ್ಯ ಅತ್ಯುತ್ತಮ ಸಾಂಘಿಕ ಪ್ರಶಸ್ತಿ, ಸುರೇಶ್ ರೈ ಅವರಿಗೆ ರಾಜ್ಯ ಯುವ ಪ್ರಶಸ್ತಿ ದೊರಕಿತ್ತು. 2007ರಲ್ಲಿ ಬೆಂಗಳೂರಿನ ಕುಂಬಳಗೋಡಿನಲ್ಲಿ ನಡೆದ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಮಾತೃಭೂಮಿ ಸಂಸ್ಥೆಯಿಂದ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ದೊರಕಿತ್ತು.

ನೆಲ್ಯಾಡಿ ಅಮ್ಮುಂಜೆ ನಾರಾಯಣ ರೈ ಮತ್ತು ರಾಮಕ್ಕೆ ದಂಪತಿಯ ಪುತ್ರನಾಗಿ 1-7-1971ರಾಗಿ ಜನಿಸಿದರು. ಪುಣ್ಚಪ್ಪಾಡಿ ,ಸವಣೂರು ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಸವಣೂರು ಪ್ರೌಢಶಾಲೆಯಲ್ಲಿ ಪ್ರೌಢಶಿಕ್ಷಣ ಪಡೆದರು. ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗಕ್ಕೆ ಸೇರಿ ನಂತರ, ಜೀಪು ಚಾಲಕನಾಗಿ ಸವಣೂರಿನಲ್ಲಿ ವೃತ್ತಿ ಜೀವನ ಆರಂಬಿಸಿದರು. 2008ರಲ್ಲಿ ನರಿಮೊಗರು ಜೆಸಿಐನ ಅಧ್ಯಕ್ಷರಾಗಿ ಹಲವು ಕಾರ್ಯಕ್ರಮಗಳನ್ನು ನಡೆಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಈ ಅವಧಿಯಲ್ಲಿ ವಲಯ ಜೂನಿಯರ್ ಜೇಸಿ ಸಮ್ಮೇಳನ ಜೇನುಗೂಡು ಕಾರ್ಯಕ್ರಮ ನಡೆಸಿ ಪ್ರಶಂಸೆಗೆ ಪಾತ್ರರಾಗಿದ್ದರು. ನರಿಮೊಗರು ಜೆಸಿಐಗೆ ಅತ್ಯುತ್ತಮ ಘಟಕ ಪ್ರಶಸ್ತಿ, ಜೆಜೆಸಿ ಸಮ್ಮೇಳನದಲ್ಲಿ ಉತ್ತಮ ಘಟಕ ಪ್ರಶಸ್ತಿ, ಜೆಸಿರೇಟ್ ಸಮ್ಮೇಳನದಲ್ಲೂ ಉತ್ತಮ ಜೇಸಿರೇಟ್ ಘಟಕ, ವ್ಯವಹಾರ ವಿಭಾಗದಲ್ಲಿ 4ನೇ ಸ್ಥಾನ, ವಲಯ ಸಮ್ಮೇಳನದಲ್ಲಿ ಅಂಕಗಳ ಆದಾರದಲ್ಲಿ ರಾಷ್ಟ್ರೀಯ ಪ್ರಶಸ್ತಿ, ಸಮುದಾಯ ಅಭಿವೃದ್ದಿ ಅತ್ಯುತ್ತಮ ಘಟಕ ಸೇರಿದಂತೆ 20ಕ್ಕೂ ಅಧಿಕ ಪ್ರಶಸ್ತಿಗಳು ದೊರಕಿತ್ತು.

ಯುವಕ ಮಂಡಲದ ಕಾರ್ಯ ಚಟುವಟಿಕೆಗಳ ಮೂಲಕ ಸಂಘಟನಾತ್ಮಕವಾಗಿ ತೊಡಗಿಸಿಕೊಂಡ ಇವರು ಪುತ್ತೂರು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾಗಿ ತಾಲೂಕು ಯುವಜನ ಮೇಳಗಳಲ್ಲಿ ಯುವ ಪ್ರಶಸ್ತಿಗಳನ್ನು ಒಕ್ಕೂಟದ ವತಿಯಿಂದ ನೀಡಿ ಹಲವು ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದ್ದರು. ಅಲ್ಲದೇ ತಾಲೂಕು ಯುವಜನ ಮೇಳಗಳಲ್ಲಿ ಭಾಗವಹಿಸಿದವರಿಗೆ ನಗದು ಪ್ರೋತ್ಸಾಹಧನ ನೀಡುವ ಮೂಲಕ ರಾಜ್ಯದಲ್ಲಿಯೇ ದಾಖಲೆಯ ಸ್ಪರ್ಧೆಗಳು ತಾಲೂಕು ಯುವಜನ ಮೇಳದಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ದರು. ಜಿಲ್ಲಾ ಯುವಜನ ಒಕ್ಕೂಟದ ಕಾರ್ಯದರ್ಶಿಯಾದ ಬಳಿಕ ಜಿಲ್ಲಾದ್ಯಂತ ಯುವಕ ಮಂಡಲಗಳ ನೊಂದಾವಣೆ ಮಾಡಿಸಿದ್ದರು. ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷರಾದ ಬಳಿಕ ಪುತ್ತೂರಿನ ಸುದಾನ ಶಾಲೆಯಲ್ಲಿ ರಾಜ್ಯಮಟ್ಟದ ಯುವಜನ ಮೇಳ ಆಯೋಜಿಸಿ ರಾಜ್ಯದ 30 ಜಿಲ್ಲೆಗಳಿಂದ ಸುಮಾರು 60 ಸಾವಿರ ಕಲಾವಿದರನ್ನು ಸೇರಿಸಿ ದಾಖಲೆಯಾಗಿತ್ತು.

ಸವಣೂರಿನಲ್ಲಿ ಹಲವು ತಾಲೂಕು, ಜಿಲ್ಲಾ ಮಟ್ಟದ ಯುವಜನ ಮೇಳ ನಡೆಸುವಲ್ಲಿಯೂ ಇವರ ಪಾತ್ರ ಮಹತ್ವದ್ದು. ಸವಣೂರು ಎಸ್.ಜೆ.ಸಿ.ಯ ಅಧ್ಯಕ್ಷರಾಗಿ , ಸವಣೂರು ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ, ಸವಣೂರು ಹಿಂದೂಜಾಗರಣ ವೇದಿಕೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಪ್ರಸ್ತುತ ಸವಣೂರು ವರ್ತಕರ ಸಂಘದ ಕಾರ್ಯದರ್ಶಿಯಾಗಿ, ಪುತ್ತೂರು ತಾಲೂಕು ದ್ವನಿ, ಬೆಳಕು ಮತ್ತು ಶಾಮಿಯಾನ ಒಕ್ಕೂಟದ ಅಧ್ಯಕ್ಷರಾಗಿ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷರಾಗಿ, ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಗೌರವ ಸಲಹೆಗಾರರಾಗಿ, ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

41 minutes ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

10 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

10 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

10 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

15 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago