ಸುಳ್ಯಕ್ಕೆ ಒಲಿದು ಬರಲಿದೆಯೇ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ. .?

August 28, 2019
10:23 PM

* ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ

Advertisement
Advertisement

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸಾರಥ್ಯ ಈ ಬಾರಿ ಸುಳ್ಯಕ್ಕೆ ಒಲಿದು ಬರುವ ಸಾಧ್ಯತೆ ಇದೆ. ಹೀಗೊಂದು ಚರ್ಚೆ ಇದೀಗ ಆರಂಭಗೊಂಡಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಒಲಿದು ಬಂದಂತೆ ಜಿಲ್ಲಾಧ್ಯಕ್ಷ ಸ್ಥಾನ ಈ ಬಾರಿ ಸುಳ್ಯದ ನಾಯಕರಿಗೆ ದಕ್ಕಲಿದೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಭಾರೀ ಸುದ್ದಿ ಹರಿದಾಡುತ್ತಿದೆ.

ಜಿಲ್ಲೆಯ ಸಂಸದ, ತಮ್ಮ ನೆಚ್ಚಿನ ನಾಯಕ ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿದರೂ ಬಿಜೆಪಿಯ ಭದ್ರ ಕೋಟೆ ಸುಳ್ಯದ ಕಾರ್ಯಕರ್ತರಲ್ಲಿ ಆ ಸಂಭ್ರಮ, ಉತ್ಸಾಹ ಅಸ್ಟಾಗಿ ಕಂಡು ಬಂದಿಲ್ಲ. ಸುಳ್ಯದ ಜನತೆಯಂತೆ ಕಾರ್ಯಕರ್ತರೂ ಬಹುನಿರೀಕ್ಷೆಯಿಂದ ಕಾದಿದ್ದ ಸಚಿವ ಸ್ಥಾನ ಈ ಬಾರಿಯೂ ಶಾಸಕ ಅಂಗಾರ ಅವರಿಗೆ ಒಲಿದು ಬಾರದ ಕಾರಣ ಉಂಟಾಗಿರುವ ಅತೃಪ್ತಿ ರಾಜ್ಯಾಧ್ಯಕ್ಷತೆ ಜಿಲ್ಲೆಗೆ ಒಲಿದು ಬಂದರೂ ಸುಳ್ಯದ ಬಿಜೆಪಿ ಸಂಭ್ರಮಿಸುತ್ತಿಲ್ಲ. ಬಹುತೇಕ ನಾಯಕರು, ಕಾರ್ಯಕರ್ತರು ಸಂಭ್ರಮಾಚರಣೆಯಿಂದ ದೂರವೇ ಉಳಿದಿದ್ದಾರೆ. ಅಸಹಕಾರ ಚಳವಳಿಯ ಮಧ್ಯೆಯೂ ಕೆಲವು ಪ್ರಮುಖ ನಾಯಕರು ಮಾತ್ರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದರೂ ಬಹುತೇಕ ಮಂದಿ ನಾಯಕರು ಕಾರ್ಯಕರ್ತರು ದೂರ ಉಳಿದಿದ್ದಾರೆ. ಸಮಾರಂಭದಲ್ಲಿ ಭಾಗವಹಿಸಿರುವುದಕ್ಕೆ ಕಾರ್ಯಕರ್ತರೂ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಮುನಿಸಿಕೊಂಡಿರುವ ಕಾರ್ಯಕರ್ತರನ್ನೂ , ನಾಯಕರನ್ನೂ ಸಮಾಧಾನಪಡಿಸಲು ಜಿಲ್ಲಾಧ್ಯಕ್ಷ ಪಟ್ಟ ಸುಳ್ಯಕ್ಕೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಳೆದ ಬಾರಿ ಜಿಲ್ಲಾಧ್ಯಕ್ಷತೆ ಪುತ್ತೂರಿನವರಾದ ಸಂಜೀವ ಮಠಂದೂರು ಅವರಿಗೆ ಒಲಿದು ಬಂದಿತ್ತು. ಮಠಂದೂರು ಶಾಸಕರಾಗಿರುವ ಕಾರಣ ಅವರು ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆ ಇಲ್ಲ. ಈ ಹಿಂದೆ ಬೆಳ್ತಂಗಡಿಯವರೂ ಬಂಟ್ವಾಳದವರೂ ಜಿಲ್ಲಾಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದರು. ಹಾಗಿರುವಾಗ ಈ ಬಾರಿ ಸುಳ್ಯಕ್ಕೆ ಅಧ್ಯಕ್ಷತೆಯನ್ನು ನೀಡಿ ಸಚಿವ ಸ್ಥಾನ ತಪ್ಪಿ ಹೋಗಿರುವ ನಿರಾಸೆಯಲ್ಲಿರುವ ಕಾರ್ಯಕರ್ತರನ್ನು ಸಮಾಧಾನಪಡಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಅಧ್ಯಕ್ಷತೆ ಸುಳ್ಯಕ್ಕೆ ಒಲಿದು ಬಂದರೆ ಸುಳ್ಯದ ಬಿಜೆಪಿಯ ಪ್ರಭಾವಿ ಮುಖಂಡರೋರ್ವರು ಅಧ್ಯಕ್ಷರಾಗಬಹುದು ಎಂದು ವಿಶ್ಲೇಷಿಸಲಾಗುತ್ತದೆ.ಈ ನಡುವೆ ಜಿಲ್ಲೆಯ ಮತ್ತೊಬ್ಬ ಪ್ರಭಾವಿ ನಾಯಕ, ವಿಧಾನ ಪರಿಷತ್ ನ ಮಾಜಿ ಸದಸ್ಯರೊಬ್ಬರ ಹೆಸರೂ ಕೇಳಿಬರುತ್ತಿದೆ.

ಬಂಪರ್ ಆಫರ್ ಇನ್ನೂ ಬರಬಹುದು…?

ಆರು ಬಾರಿ ಶಾಸಕರಾದ ಎಸ್. ಅಂಗಾರ ಅವರಿಗೆ ಈ ಬಾರಿ ಇನ್ನು ಸಚಿವ ಸ್ಥಾನ ಸಿಗುವ ಸಾಧ್ಯತೆ ತೀರಾ ವಿರಳ. ನಿಗಮ ಅಧ್ಯಕ್ಷತೆಯನ್ನು ಅವರು ಸ್ವೀಕರಿಸುವ ಸಾಧ್ಯತೆಯೂ ಕಡಿಮೆ. ಹಾಗಾದರೆ ಸರಕಾರ ಉಳಿದುಕೊಂಡರೆ ಸುಳ್ಯದ ಬಿಜೆಪಿ ಮುಖಂಡರಿಗೆ ಹೆಚ್ಚಿನ ಸ್ಥಾನ ಮಾನಗಳು ದೊರೆಯಬಹುದು. ನಿಗಮಾಧ್ಯಕ್ಷತೆ, ಅಕಾಡೆಮಿಗಳ ಸಾರಥ್ಯ, ಪ್ರಮುಖ ದೇವಾಲಯಗಳ ಆಡಳಿತದ ಚುಕ್ಕಾಣಿ ಹೀಗೆ ಬಂಪರ್ ಆಫರ್ ಗಳೇ ಬರಬಹುದು ಎಂಬ ಲೆಕ್ಕಾಚಾರಗಳೂ ಇನ್ನೊಂದೆಡೆ ನಡೆಯುತ್ತಿದೆ. ಕಳೆದ ಬಿಜೆಪಿ ಅಧಿಕಾರ ಅವಧಿಯಲ್ಲಿ ಸುಳ್ಯದ ಮುಖಂಡರಿಗೆ ಪ್ರಮುಖ ನಿಗಮದ ಅಧ್ಯಕ್ಷತೆ ಒಲಿದಿತ್ತು. ಹೀಗಾಗಿ ಸುಳ್ಯಕ್ಕೆ ಸಚಿವ ಸ್ಥಾನ ಸಿಗದೇ ಇದ್ದರೂ  ಈಗ ಜಿಲ್ಲೆಯ ನಾಯಕರ, ರಾಜ್ಯದ ನಾಯಕರ ವಿರೋಧವನ್ನೂ ಯಾರೂ ಕಟ್ಟಿಕೊಳ್ಳಲು ಸಿದ್ಧರಿಲ್ಲ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |
May 25, 2025
9:07 AM
by: ದ ರೂರಲ್ ಮಿರರ್.ಕಾಂ
ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ
May 25, 2025
6:13 AM
by: The Rural Mirror ಸುದ್ದಿಜಾಲ
ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ
May 25, 2025
6:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group