ಸುಳ್ಯ: ವೈದ್ಯರಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಮತ್ತೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಸುಳ್ಯ ಸರಕಾರಿ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. 48 ಗಂಟೆಗಳ ಬಳಿಕ ಆಸ್ಪತ್ರೆಯನ್ನು ಸ್ಯಾನಿಟೈಸ್ ಮಾಡಿ ಬಳಿಕ ತೆರೆಯಲಾಗುವುದು ಎಂದು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೆ.ವಿ.ಕರುಣಾಕರ ತಿಳಿಸಿದ್ದಾರೆ.
ಸುಳ್ಯ ಸರಕಾರಿ ಆಸ್ಪತ್ರೆಯಿಂದ ಪರೀಕ್ಷೆಗೆ ಕಳುಹಿಸಿದ 32 ಮಾದರಿಯಲ್ಲಿ 6 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಒಬ್ಬರು ವೈದ್ಯರು, ಒಬ್ಬರು ನರ್ಸಿಂಗ್ ಸಿಬ್ಬಂದಿ, 3 ಡಯಾಲಿಸಿಸ್ ಸಿಬ್ಬಂದಿ ಮತ್ತು ಒಬ್ಬರು ರೋಗಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಕೆಲವು ದಿನಗಳ ಹಿಂದೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗೆ ಮತ್ತು ಈ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ಓರ್ವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಯ ವೈದ್ಯರ ಮತ್ತು ಸಿಬ್ಬಂದಿಗಳ ಗಂಟಲ ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ನರ್ಸ್ ಓರ್ವರಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಆಸ್ಪತ್ರೆಯ ತೀವ್ರ ನಿಗಾ ಘಟಕ ಮತ್ತು ಡಯಾಲಿಸಿಸ್ ಘಟಕವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಇದೀಗ ಆಸ್ಪತ್ರೆಯ ವೈದ್ಯರಿಗೆ ಮತ್ತು ದಾದಿಯರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದ್ದು ತುರ್ತು ಚಿಕಿತ್ಸಾ ವಿಭಾಗ ಸೇರಿ ಎಲ್ಲಾ ವಿಭಾಗವನ್ನೂ ಮುಚ್ಚಲಾಗುವುದು. ಒಳ ರೋಗಿಗಳ ಚಿಕಿತ್ಸೆ ಮಾತ್ರ ಎಂದಿನಂತೆ ನಡೆಯಲಿದೆ. ಅವರಿಗೆ ಚಿಕಿತ್ಸೆ ನೀಡಲು ಒಬ್ಬರು ವೈದ್ಯರು ಮತ್ತು ಕೆಲ ಮಂದಿ ನರ್ಸಿಂಗ್ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. 48 ಗಂಟೆಗಳ ಬಳಿಕ ಸಂಪೂರ್ಣ ಸ್ಯಾನಿಟೈಸ್ ಮಾಡಿದ ಬಳಿಕ ಶನಿವಾರದಿಂದ ಆಸ್ಪತ್ರೆ ಮತ್ತೆ ತೆರೆದು ಕಾರ್ಯಾಚರಿಲಿದೆ ಎಂದು ಡಾ.ಕರುಣಾಕರ ತಿಳಿಸಿದ್ದಾರೆ.
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…