Advertisement
ಸುದ್ದಿಗಳು

ಸುಳ್ಯಕ್ಕೆ ಸಚಿವ ಸ್ಥಾನ : ಜನತೆಯ ಪಕ್ಷಾತೀತ ಒಕ್ಕೊರಲ ಆಗ್ರಹವಾಗಿತ್ತು

Share

ಸುಳ್ಯ: ಶುದ್ದ ಹಸ್ತರೆಂದು ಜನಜನಿತ ಮಾನ್ಯ ಹಿರಿಯ ಶಾಸಕರಾದ ಅಂಗಾರರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡದೇ ಇರುವುದು ಅಮರ ಸುಳ್ಯದ 70 ವರ್ಷದ ಮೀಸಲು ಕ್ಷೇತ್ರದಲ್ಲಿ ಸತತವಾಗಿ 27 ವರ್ಷ ಅವಧಿಗೆ ಬೆಂಬಲಿಸಿದ ಜನತೆಗೆ, ಶೋಷಿತರಿಗೆ ಮಾಡಿದ ಅನ್ಯಾಯ ಹಾಗೂ ಅವಮಾನ. ಜನರು ಇಟ್ಟಿರುವ ಸುಧೀರ್ಘ ಅದಮ್ಯ ವಿಶ್ವಾಸಕ್ಕೆ ಧಕ್ಕೆಯಾಗುತ್ತದೆ ಎಂದು ಆಮ್ ಆದ್ಮಿ ಪಕ್ಷ ,ಯುವ ಘಟಕ (AYW) ಮತ್ತು ವಿದ್ಯಾರ್ಥಿ ಘಟಕ (CYSS)ದ ರಾಜ್ಯ ಸಮಿತಿ ಸದಸ್ಯ ಅಶೋಕ ಎಡಮಲೆ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವ ಸ್ಥಾನ ಸುಳ್ಯದ ಜನತೆಯ ಪಕ್ಷಾತೀತ ಒಕ್ಕೊರಲ ಆಗ್ರಹವು ಆಗಿತ್ತು.ಕ್ಷೇತ್ರದ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗದೇ ಇರುವುದು. ವಿರೋಧಿ ಪಕ್ಷಗಳ ಸರಕಾರಗಳು ನಿರ್ಲಕ್ಷ್ಯ ಮಾಡಿರುವ ಸಹಜ ರಾಜಕೀಯ ಪರಿಸ್ಥಿತಿಯು ಕಾರಣವಾಗಿತ್ತು . ಇಂತಹ ಸಂದರ್ಭಗಳಲ್ಲಿ ತನ್ನದೆ ಪಕ್ಷದ ಸರಕಾರದಿಂದ ಸಚಿವರಾಗಿ, ಸುಳ್ಯ ನಗರವನ್ನು ಪುರಸಭೆ ಪರಿವರ್ತನೆ, ಇಲ್ಲಿನ ಶಾಶ್ವತ ಕುಡಿಯುವ ನೀರಿನ ಯೋಜನೆ, ಪಯಸ್ವಿನಿ ಹೊಳೆಗೆ ಕಿಂಡಿ ಅಣೆಕಟ್ಟು, ಯೋಜಿತ ರಬ್ಬರ್ ಕಾರ್ಖಾನೆ ಚಾಲನೆ, ಇಲ್ಲಿನ ಪ್ರಾಕೃತಿಕ ಪರಿಸರದ ಹದಗೆಟ್ಟ ಗ್ರಾಮೀಣ ರಸ್ತೆಗೆ ಕಾಯಕಲ್ಪ, ನೂತನ ಕಡಬ ತಾಲೂಕಿಗೆ ಪ್ರಾಶಸ್ತ್ಯ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಮತ್ತಷ್ಟು ಅನುದಾನ, ಕೃಷಿ ಪ್ರಧಾನ ಆಧಾರಿತ ಕೈಗಾರಿಕೆ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣ ಅಭಿವೃದ್ಧಿ , ಹಾಲಿ ಸರಕಾರಿ ಶಿಕ್ಷಣದ ಕಾಲೇಜುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಇತ್ಯಾದಿಗಳನ್ನು ಕಾರ್ಯರೂಪಕ್ಕೆ ತರಲು ಸಹಕಾರಿ ಎಂಬುದು ಜನಸಾಮಾನ್ಯರ ಅಪೇಕ್ಷೆಯಾಗಿದೆ.

ಆದಾಗ್ಯೂ ಎರಡನೇ ಹಂತದಲ್ಲಿ ಕ್ಯಾಬಿನೆಟ್ ಸಚಿವ ಸ್ಥಾನ ದೊರೆತು ಸುಳ್ಯ, ಕಡಬದ ಜೊತೆಗೆ ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿ ಸುಳ್ಯದ ಶಾಸಕರು ಗೌರವಕ್ಕೆ ಪಾತ್ರರಾಗಲಿ ಎಂಬುದಾಗಿ ಪಕ್ಷಾತೀತವಾಗಿ ಜನತೆ ಬಯಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

17 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

18 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

21 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago