ಸುದ್ದಿಗಳು

ಸುಳ್ಯಕ್ಕೊಂದು ಸಚಿವ ಸ್ಥಾನ : “ಶಾಸಕ ಎಸ್.ಅಂಗಾರ” ಇನ್ನು “ಸಚಿವ ಎಸ್.ಅಂಗಾರ”…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯ ಶಾಸಕರಾಗಿ ಕೆಲಸ ಮಾಡುತ್ತಿದ್ದ  ಎಸ್.ಅಂಗಾರ ಅವರು ಇನ್ನು ಸಚಿವ ಎಸ್.ಅಂಗಾರ..? ಈ ದಿನಗಳು ಹತ್ತಿರ ಬಂದಿವೆ ಎಂದು ಮೂಲಗಳು ತಿಳಿಸಿವೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ ಸತತವಾಗಿ ಬಿಜೆಪಿ ಗೆದ್ದುಕೊಂಡಿತ್ತು. ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂದೂ ಎಲ್.ಕೆ.ಅಡ್ವಾಣಿ ಅವರಿಂದಲೂ ಹೇಳಿಸಿಕೊಂಡಿರುವ ಕ್ಷೇತ್ರ.  ಕಳೆದ ಬಾರಿ ಇಡೀ ಜಿಲ್ಲೆಯಲ್ಲಿ ಬಿಜೆಪಿ ಸೋತಿದ್ದರೂ ಸುಳ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿತ್ತು. ಹಾಗಿದ್ದರೂ ಸತತ 26 ವರ್ಷಗಳಿಂದ ಶಾಸಕರಾಗಿದ್ದ ಎಸ್.ಅಂಗಾರ ಅವರಿಗೆ ಇದುವರೆಗೆ ಸಚಿವ ಸ್ಥಾನ ಲಭ್ಯವಾಗಿರಲಿಲ್ಲ. ಪೂರ್ಣ ಪ್ರಮಾಣದಲ್ಲಿ ಬಿಜೆಪಿ ಸರಕಾರವೂ ಬಂದಿರಲಿಲ್ಲ. ಬಂದಿದ್ದರೂ ಅವಕಾಶ ಸಿಗಲಿಲ್ಲ. ಸಚಿವ ಸ್ಥಾನಕ್ಕಾಗಿ ವಿಧಾನಸಭೆಯ  ಹಿರಿಯ ಶಾಸಕ ಅಂಗಾರ ಅವರು ಎಂದೂ ಲಾಬಿಯನ್ನೂ ಮಾಡಿರಲಿಲ್ಲ. ಇದೀಗ ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ರಚನೆಯಾಗಿದೆ. ಇದುವರೆಗೆ ಸಚಿವ ಸಂಪುಟ ರಚನೆಯಾಗಿಲ್ಲ. ಇದೀಗ ಸಚಿವ ಸಂಪುಟ ಆ.17 ರ ನಂತರ ರಚನೆಯಾಗಲಿದ್ದು ಇದಕ್ಕಾಗಿ ಪಟ್ಟಿ ರಚನೆಯಾಗಿದೆ. ಇದರಲ್ಲಿ  ಎಸ್.ಅಂಗಾರ ಅವರ ಹೆಸರೂ ಸೇರ್ಪಡೆಯಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಅನಾಯಾಸವಾಗಿ ಈಗಲಾದರೂ ಸುಳ್ಯ ಕ್ಷೇತ್ರಕ್ಕೊಂದು ಸಚಿವ ಸ್ಥಾನ ಲಭಿಸಬೇಕು ಎಂಬುದು ಮತದಾರರ ಒತ್ತಾಸೆ. ಇದಕ್ಕಾಗಿ ಯಾವುದೇ ಲಾಬಿ, ಒತ್ತಾಯವೂ ಅನಗತ್ಯ. ಏಕೆಂದರೆ ಸುಳ್ಯದ ಎಲ್ಲಾ ಮತದಾರರಿಗೆ , ಕಾರ್ಯಕರ್ತರಿಗೆ ಬಿಜೆಪಿ ಸಹಜವಾಗಿಯೇ ಮಾನ-ಸಮ್ಮಾನ ನೀಡಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ 26 ವರ್ಷಗಳಿಂದ ಶಾಸಕರಾಗಿರುವ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂಬುದು ಮೂಲಗಳ ಸ್ಪಷ್ಟ ಅಭಿಪ್ರಾಯ.

ಇದರ ಜೊತೆಗೆ ಸುಳ್ಯದ ಬಿಜೆಪಿ ಪಕ್ಷದ ಜವಾಬ್ದಾರಿಯೂ ಹೆಚ್ಚಿದೆ. ಸುಳ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಮೂಲಭೂತವಾದ ಹಲವಾರು ಬೇಡಿಕೆಗಳು ಇವೆ. ಇವೆಲ್ಲವೂ ಇನ್ನು ಹೆಚ್ಚು ಜೀವಪಡೆಯುವುದು, ಹೀಗಾಗಿ  ಅನುದಾನಗಳೂ ಹೆಚ್ಚು ಲಭ್ಯವಾಗುವಂತೆ ಮಾಡಬೇಕು ಎಂಬುದರ ಬಗ್ಗೆಯೂ ಸ್ಪಷ್ಟವಾದ ಸೂಚನೆ ನೀಡಲಾಗಿದೆ ಎಂದೂ ಮೂಲಗಳು ತಿಳಿಸಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

4 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

4 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

4 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

5 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

5 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

6 hours ago