Advertisement
ಸುದ್ದಿಗಳು

ಸುಳ್ಯಕ್ಕೊಂದು ಸಚಿವ ಸ್ಥಾನ : “ಶಾಸಕ ಎಸ್.ಅಂಗಾರ” ಇನ್ನು “ಸಚಿವ ಎಸ್.ಅಂಗಾರ”…?

Share

ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯ ಶಾಸಕರಾಗಿ ಕೆಲಸ ಮಾಡುತ್ತಿದ್ದ  ಎಸ್.ಅಂಗಾರ ಅವರು ಇನ್ನು ಸಚಿವ ಎಸ್.ಅಂಗಾರ..? ಈ ದಿನಗಳು ಹತ್ತಿರ ಬಂದಿವೆ ಎಂದು ಮೂಲಗಳು ತಿಳಿಸಿವೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ ಸತತವಾಗಿ ಬಿಜೆಪಿ ಗೆದ್ದುಕೊಂಡಿತ್ತು. ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂದೂ ಎಲ್.ಕೆ.ಅಡ್ವಾಣಿ ಅವರಿಂದಲೂ ಹೇಳಿಸಿಕೊಂಡಿರುವ ಕ್ಷೇತ್ರ.  ಕಳೆದ ಬಾರಿ ಇಡೀ ಜಿಲ್ಲೆಯಲ್ಲಿ ಬಿಜೆಪಿ ಸೋತಿದ್ದರೂ ಸುಳ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿತ್ತು. ಹಾಗಿದ್ದರೂ ಸತತ 26 ವರ್ಷಗಳಿಂದ ಶಾಸಕರಾಗಿದ್ದ ಎಸ್.ಅಂಗಾರ ಅವರಿಗೆ ಇದುವರೆಗೆ ಸಚಿವ ಸ್ಥಾನ ಲಭ್ಯವಾಗಿರಲಿಲ್ಲ. ಪೂರ್ಣ ಪ್ರಮಾಣದಲ್ಲಿ ಬಿಜೆಪಿ ಸರಕಾರವೂ ಬಂದಿರಲಿಲ್ಲ. ಬಂದಿದ್ದರೂ ಅವಕಾಶ ಸಿಗಲಿಲ್ಲ. ಸಚಿವ ಸ್ಥಾನಕ್ಕಾಗಿ ವಿಧಾನಸಭೆಯ  ಹಿರಿಯ ಶಾಸಕ ಅಂಗಾರ ಅವರು ಎಂದೂ ಲಾಬಿಯನ್ನೂ ಮಾಡಿರಲಿಲ್ಲ. ಇದೀಗ ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ರಚನೆಯಾಗಿದೆ. ಇದುವರೆಗೆ ಸಚಿವ ಸಂಪುಟ ರಚನೆಯಾಗಿಲ್ಲ. ಇದೀಗ ಸಚಿವ ಸಂಪುಟ ಆ.17 ರ ನಂತರ ರಚನೆಯಾಗಲಿದ್ದು ಇದಕ್ಕಾಗಿ ಪಟ್ಟಿ ರಚನೆಯಾಗಿದೆ. ಇದರಲ್ಲಿ  ಎಸ್.ಅಂಗಾರ ಅವರ ಹೆಸರೂ ಸೇರ್ಪಡೆಯಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಅನಾಯಾಸವಾಗಿ ಈಗಲಾದರೂ ಸುಳ್ಯ ಕ್ಷೇತ್ರಕ್ಕೊಂದು ಸಚಿವ ಸ್ಥಾನ ಲಭಿಸಬೇಕು ಎಂಬುದು ಮತದಾರರ ಒತ್ತಾಸೆ. ಇದಕ್ಕಾಗಿ ಯಾವುದೇ ಲಾಬಿ, ಒತ್ತಾಯವೂ ಅನಗತ್ಯ. ಏಕೆಂದರೆ ಸುಳ್ಯದ ಎಲ್ಲಾ ಮತದಾರರಿಗೆ , ಕಾರ್ಯಕರ್ತರಿಗೆ ಬಿಜೆಪಿ ಸಹಜವಾಗಿಯೇ ಮಾನ-ಸಮ್ಮಾನ ನೀಡಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ 26 ವರ್ಷಗಳಿಂದ ಶಾಸಕರಾಗಿರುವ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂಬುದು ಮೂಲಗಳ ಸ್ಪಷ್ಟ ಅಭಿಪ್ರಾಯ.

ಇದರ ಜೊತೆಗೆ ಸುಳ್ಯದ ಬಿಜೆಪಿ ಪಕ್ಷದ ಜವಾಬ್ದಾರಿಯೂ ಹೆಚ್ಚಿದೆ. ಸುಳ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಮೂಲಭೂತವಾದ ಹಲವಾರು ಬೇಡಿಕೆಗಳು ಇವೆ. ಇವೆಲ್ಲವೂ ಇನ್ನು ಹೆಚ್ಚು ಜೀವಪಡೆಯುವುದು, ಹೀಗಾಗಿ  ಅನುದಾನಗಳೂ ಹೆಚ್ಚು ಲಭ್ಯವಾಗುವಂತೆ ಮಾಡಬೇಕು ಎಂಬುದರ ಬಗ್ಗೆಯೂ ಸ್ಪಷ್ಟವಾದ ಸೂಚನೆ ನೀಡಲಾಗಿದೆ ಎಂದೂ ಮೂಲಗಳು ತಿಳಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

17 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago