Advertisement
ಸುದ್ದಿಗಳು

ಸುಳ್ಯಕ್ಕೊಂದು ಸಚಿವ ಸ್ಥಾನ : “ಶಾಸಕ ಎಸ್.ಅಂಗಾರ” ಇನ್ನು “ಸಚಿವ ಎಸ್.ಅಂಗಾರ”…?

Share

ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯ ಶಾಸಕರಾಗಿ ಕೆಲಸ ಮಾಡುತ್ತಿದ್ದ  ಎಸ್.ಅಂಗಾರ ಅವರು ಇನ್ನು ಸಚಿವ ಎಸ್.ಅಂಗಾರ..? ಈ ದಿನಗಳು ಹತ್ತಿರ ಬಂದಿವೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ ಸತತವಾಗಿ ಬಿಜೆಪಿ ಗೆದ್ದುಕೊಂಡಿತ್ತು. ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂದೂ ಎಲ್.ಕೆ.ಅಡ್ವಾಣಿ ಅವರಿಂದಲೂ ಹೇಳಿಸಿಕೊಂಡಿರುವ ಕ್ಷೇತ್ರ.  ಕಳೆದ ಬಾರಿ ಇಡೀ ಜಿಲ್ಲೆಯಲ್ಲಿ ಬಿಜೆಪಿ ಸೋತಿದ್ದರೂ ಸುಳ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿತ್ತು. ಹಾಗಿದ್ದರೂ ಸತತ 26 ವರ್ಷಗಳಿಂದ ಶಾಸಕರಾಗಿದ್ದ ಎಸ್.ಅಂಗಾರ ಅವರಿಗೆ ಇದುವರೆಗೆ ಸಚಿವ ಸ್ಥಾನ ಲಭ್ಯವಾಗಿರಲಿಲ್ಲ. ಪೂರ್ಣ ಪ್ರಮಾಣದಲ್ಲಿ ಬಿಜೆಪಿ ಸರಕಾರವೂ ಬಂದಿರಲಿಲ್ಲ. ಬಂದಿದ್ದರೂ ಅವಕಾಶ ಸಿಗಲಿಲ್ಲ. ಸಚಿವ ಸ್ಥಾನಕ್ಕಾಗಿ ವಿಧಾನಸಭೆಯ  ಹಿರಿಯ ಶಾಸಕ ಅಂಗಾರ ಅವರು ಎಂದೂ ಲಾಬಿಯನ್ನೂ ಮಾಡಿರಲಿಲ್ಲ. ಇದೀಗ ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ರಚನೆಯಾಗಿದೆ. ಇದುವರೆಗೆ ಸಚಿವ ಸಂಪುಟ ರಚನೆಯಾಗಿಲ್ಲ. ಇದೀಗ ಸಚಿವ ಸಂಪುಟ ಆ.17 ರ ನಂತರ ರಚನೆಯಾಗಲಿದ್ದು ಇದಕ್ಕಾಗಿ ಪಟ್ಟಿ ರಚನೆಯಾಗಿದೆ. ಇದರಲ್ಲಿ  ಎಸ್.ಅಂಗಾರ ಅವರ ಹೆಸರೂ ಸೇರ್ಪಡೆಯಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಅನಾಯಾಸವಾಗಿ ಈಗಲಾದರೂ ಸುಳ್ಯ ಕ್ಷೇತ್ರಕ್ಕೊಂದು ಸಚಿವ ಸ್ಥಾನ ಲಭಿಸಬೇಕು ಎಂಬುದು ಮತದಾರರ ಒತ್ತಾಸೆ. ಇದಕ್ಕಾಗಿ ಯಾವುದೇ ಲಾಬಿ, ಒತ್ತಾಯವೂ ಅನಗತ್ಯ. ಏಕೆಂದರೆ ಸುಳ್ಯದ ಎಲ್ಲಾ ಮತದಾರರಿಗೆ , ಕಾರ್ಯಕರ್ತರಿಗೆ ಬಿಜೆಪಿ ಸಹಜವಾಗಿಯೇ ಮಾನ-ಸಮ್ಮಾನ ನೀಡಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ 26 ವರ್ಷಗಳಿಂದ ಶಾಸಕರಾಗಿರುವ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂಬುದು ಮೂಲಗಳ ಸ್ಪಷ್ಟ ಅಭಿಪ್ರಾಯ.

ಇದರ ಜೊತೆಗೆ ಸುಳ್ಯದ ಬಿಜೆಪಿ ಪಕ್ಷದ ಜವಾಬ್ದಾರಿಯೂ ಹೆಚ್ಚಿದೆ. ಸುಳ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಮೂಲಭೂತವಾದ ಹಲವಾರು ಬೇಡಿಕೆಗಳು ಇವೆ. ಇವೆಲ್ಲವೂ ಇನ್ನು ಹೆಚ್ಚು ಜೀವಪಡೆಯುವುದು, ಹೀಗಾಗಿ  ಅನುದಾನಗಳೂ ಹೆಚ್ಚು ಲಭ್ಯವಾಗುವಂತೆ ಮಾಡಬೇಕು ಎಂಬುದರ ಬಗ್ಗೆಯೂ ಸ್ಪಷ್ಟವಾದ ಸೂಚನೆ ನೀಡಲಾಗಿದೆ ಎಂದೂ ಮೂಲಗಳು ತಿಳಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

34 minutes ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

5 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

5 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

15 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

16 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

2 days ago