Advertisement
ಸುದ್ದಿಗಳು

ಸುಳ್ಯಕ್ಕೊಂದು ಸಚಿವ ಸ್ಥಾನ : “ಶಾಸಕ ಎಸ್.ಅಂಗಾರ” ಇನ್ನು “ಸಚಿವ ಎಸ್.ಅಂಗಾರ”…?

Share

ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯ ಶಾಸಕರಾಗಿ ಕೆಲಸ ಮಾಡುತ್ತಿದ್ದ  ಎಸ್.ಅಂಗಾರ ಅವರು ಇನ್ನು ಸಚಿವ ಎಸ್.ಅಂಗಾರ..? ಈ ದಿನಗಳು ಹತ್ತಿರ ಬಂದಿವೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ ಸತತವಾಗಿ ಬಿಜೆಪಿ ಗೆದ್ದುಕೊಂಡಿತ್ತು. ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂದೂ ಎಲ್.ಕೆ.ಅಡ್ವಾಣಿ ಅವರಿಂದಲೂ ಹೇಳಿಸಿಕೊಂಡಿರುವ ಕ್ಷೇತ್ರ.  ಕಳೆದ ಬಾರಿ ಇಡೀ ಜಿಲ್ಲೆಯಲ್ಲಿ ಬಿಜೆಪಿ ಸೋತಿದ್ದರೂ ಸುಳ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿತ್ತು. ಹಾಗಿದ್ದರೂ ಸತತ 26 ವರ್ಷಗಳಿಂದ ಶಾಸಕರಾಗಿದ್ದ ಎಸ್.ಅಂಗಾರ ಅವರಿಗೆ ಇದುವರೆಗೆ ಸಚಿವ ಸ್ಥಾನ ಲಭ್ಯವಾಗಿರಲಿಲ್ಲ. ಪೂರ್ಣ ಪ್ರಮಾಣದಲ್ಲಿ ಬಿಜೆಪಿ ಸರಕಾರವೂ ಬಂದಿರಲಿಲ್ಲ. ಬಂದಿದ್ದರೂ ಅವಕಾಶ ಸಿಗಲಿಲ್ಲ. ಸಚಿವ ಸ್ಥಾನಕ್ಕಾಗಿ ವಿಧಾನಸಭೆಯ  ಹಿರಿಯ ಶಾಸಕ ಅಂಗಾರ ಅವರು ಎಂದೂ ಲಾಬಿಯನ್ನೂ ಮಾಡಿರಲಿಲ್ಲ. ಇದೀಗ ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ರಚನೆಯಾಗಿದೆ. ಇದುವರೆಗೆ ಸಚಿವ ಸಂಪುಟ ರಚನೆಯಾಗಿಲ್ಲ. ಇದೀಗ ಸಚಿವ ಸಂಪುಟ ಆ.17 ರ ನಂತರ ರಚನೆಯಾಗಲಿದ್ದು ಇದಕ್ಕಾಗಿ ಪಟ್ಟಿ ರಚನೆಯಾಗಿದೆ. ಇದರಲ್ಲಿ  ಎಸ್.ಅಂಗಾರ ಅವರ ಹೆಸರೂ ಸೇರ್ಪಡೆಯಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಅನಾಯಾಸವಾಗಿ ಈಗಲಾದರೂ ಸುಳ್ಯ ಕ್ಷೇತ್ರಕ್ಕೊಂದು ಸಚಿವ ಸ್ಥಾನ ಲಭಿಸಬೇಕು ಎಂಬುದು ಮತದಾರರ ಒತ್ತಾಸೆ. ಇದಕ್ಕಾಗಿ ಯಾವುದೇ ಲಾಬಿ, ಒತ್ತಾಯವೂ ಅನಗತ್ಯ. ಏಕೆಂದರೆ ಸುಳ್ಯದ ಎಲ್ಲಾ ಮತದಾರರಿಗೆ , ಕಾರ್ಯಕರ್ತರಿಗೆ ಬಿಜೆಪಿ ಸಹಜವಾಗಿಯೇ ಮಾನ-ಸಮ್ಮಾನ ನೀಡಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ 26 ವರ್ಷಗಳಿಂದ ಶಾಸಕರಾಗಿರುವ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂಬುದು ಮೂಲಗಳ ಸ್ಪಷ್ಟ ಅಭಿಪ್ರಾಯ.

ಇದರ ಜೊತೆಗೆ ಸುಳ್ಯದ ಬಿಜೆಪಿ ಪಕ್ಷದ ಜವಾಬ್ದಾರಿಯೂ ಹೆಚ್ಚಿದೆ. ಸುಳ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಮೂಲಭೂತವಾದ ಹಲವಾರು ಬೇಡಿಕೆಗಳು ಇವೆ. ಇವೆಲ್ಲವೂ ಇನ್ನು ಹೆಚ್ಚು ಜೀವಪಡೆಯುವುದು, ಹೀಗಾಗಿ  ಅನುದಾನಗಳೂ ಹೆಚ್ಚು ಲಭ್ಯವಾಗುವಂತೆ ಮಾಡಬೇಕು ಎಂಬುದರ ಬಗ್ಗೆಯೂ ಸ್ಪಷ್ಟವಾದ ಸೂಚನೆ ನೀಡಲಾಗಿದೆ ಎಂದೂ ಮೂಲಗಳು ತಿಳಿಸಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

1 hour ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

7 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

7 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

15 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

15 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago