Advertisement
ಸುದ್ದಿಗಳು

ಸುಳ್ಯಕ್ಕೊಂದು ಸಚಿವ ಸ್ಥಾನ : “ಶಾಸಕ ಎಸ್.ಅಂಗಾರ” ಇನ್ನು “ಸಚಿವ ಎಸ್.ಅಂಗಾರ”…?

Share

ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯ ಶಾಸಕರಾಗಿ ಕೆಲಸ ಮಾಡುತ್ತಿದ್ದ  ಎಸ್.ಅಂಗಾರ ಅವರು ಇನ್ನು ಸಚಿವ ಎಸ್.ಅಂಗಾರ..? ಈ ದಿನಗಳು ಹತ್ತಿರ ಬಂದಿವೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ ಸತತವಾಗಿ ಬಿಜೆಪಿ ಗೆದ್ದುಕೊಂಡಿತ್ತು. ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂದೂ ಎಲ್.ಕೆ.ಅಡ್ವಾಣಿ ಅವರಿಂದಲೂ ಹೇಳಿಸಿಕೊಂಡಿರುವ ಕ್ಷೇತ್ರ.  ಕಳೆದ ಬಾರಿ ಇಡೀ ಜಿಲ್ಲೆಯಲ್ಲಿ ಬಿಜೆಪಿ ಸೋತಿದ್ದರೂ ಸುಳ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿತ್ತು. ಹಾಗಿದ್ದರೂ ಸತತ 26 ವರ್ಷಗಳಿಂದ ಶಾಸಕರಾಗಿದ್ದ ಎಸ್.ಅಂಗಾರ ಅವರಿಗೆ ಇದುವರೆಗೆ ಸಚಿವ ಸ್ಥಾನ ಲಭ್ಯವಾಗಿರಲಿಲ್ಲ. ಪೂರ್ಣ ಪ್ರಮಾಣದಲ್ಲಿ ಬಿಜೆಪಿ ಸರಕಾರವೂ ಬಂದಿರಲಿಲ್ಲ. ಬಂದಿದ್ದರೂ ಅವಕಾಶ ಸಿಗಲಿಲ್ಲ. ಸಚಿವ ಸ್ಥಾನಕ್ಕಾಗಿ ವಿಧಾನಸಭೆಯ  ಹಿರಿಯ ಶಾಸಕ ಅಂಗಾರ ಅವರು ಎಂದೂ ಲಾಬಿಯನ್ನೂ ಮಾಡಿರಲಿಲ್ಲ. ಇದೀಗ ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ರಚನೆಯಾಗಿದೆ. ಇದುವರೆಗೆ ಸಚಿವ ಸಂಪುಟ ರಚನೆಯಾಗಿಲ್ಲ. ಇದೀಗ ಸಚಿವ ಸಂಪುಟ ಆ.17 ರ ನಂತರ ರಚನೆಯಾಗಲಿದ್ದು ಇದಕ್ಕಾಗಿ ಪಟ್ಟಿ ರಚನೆಯಾಗಿದೆ. ಇದರಲ್ಲಿ  ಎಸ್.ಅಂಗಾರ ಅವರ ಹೆಸರೂ ಸೇರ್ಪಡೆಯಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

Advertisement

ಅನಾಯಾಸವಾಗಿ ಈಗಲಾದರೂ ಸುಳ್ಯ ಕ್ಷೇತ್ರಕ್ಕೊಂದು ಸಚಿವ ಸ್ಥಾನ ಲಭಿಸಬೇಕು ಎಂಬುದು ಮತದಾರರ ಒತ್ತಾಸೆ. ಇದಕ್ಕಾಗಿ ಯಾವುದೇ ಲಾಬಿ, ಒತ್ತಾಯವೂ ಅನಗತ್ಯ. ಏಕೆಂದರೆ ಸುಳ್ಯದ ಎಲ್ಲಾ ಮತದಾರರಿಗೆ , ಕಾರ್ಯಕರ್ತರಿಗೆ ಬಿಜೆಪಿ ಸಹಜವಾಗಿಯೇ ಮಾನ-ಸಮ್ಮಾನ ನೀಡಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ 26 ವರ್ಷಗಳಿಂದ ಶಾಸಕರಾಗಿರುವ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂಬುದು ಮೂಲಗಳ ಸ್ಪಷ್ಟ ಅಭಿಪ್ರಾಯ.

ಇದರ ಜೊತೆಗೆ ಸುಳ್ಯದ ಬಿಜೆಪಿ ಪಕ್ಷದ ಜವಾಬ್ದಾರಿಯೂ ಹೆಚ್ಚಿದೆ. ಸುಳ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಮೂಲಭೂತವಾದ ಹಲವಾರು ಬೇಡಿಕೆಗಳು ಇವೆ. ಇವೆಲ್ಲವೂ ಇನ್ನು ಹೆಚ್ಚು ಜೀವಪಡೆಯುವುದು, ಹೀಗಾಗಿ  ಅನುದಾನಗಳೂ ಹೆಚ್ಚು ಲಭ್ಯವಾಗುವಂತೆ ಮಾಡಬೇಕು ಎಂಬುದರ ಬಗ್ಗೆಯೂ ಸ್ಪಷ್ಟವಾದ ಸೂಚನೆ ನೀಡಲಾಗಿದೆ ಎಂದೂ ಮೂಲಗಳು ತಿಳಿಸಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

28 minutes ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

1 hour ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 hours ago

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?

1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…

2 hours ago

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ.…

19 hours ago