Advertisement
ಸುದ್ದಿಗಳು

ಸುಳ್ಯದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ

Share

ಸುಳ್ಯ: ತ್ರಿಖಂಡವಾದ ಭಾರತ ಮತ್ತೆ ಒಂದಾಗಬೇಕು ಎಂಬ ಸಂಕಲ್ಪದೊಂದಿಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ ಪ್ರಖಂಡ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ ಮತ್ತು ಪಂಜಿನ ಮೆರವಣಿಗೆ ಸುಳ್ಯದಲ್ಲಿ ನಡೆಯಿತು.
ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ ಅಧ್ಯಕ್ಷ ತೆ ವಹಿಸಿದ್ದರು. ನ್ಯಾಯವಾದಿ ಪ್ರಜ್ವಲ್ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು. ನಿವೃತ್ತ ಸೈನಿಕ ಎ.ವಿ.ಶಿವಲಿಂಗೇ ಗೌಡ ಮುಖ್ಯ ಅತಿಥಿಯಾಗಿದ್ದರು.
ಭಜರಂಗದಳ ತಾಲೂಕು ಸಂಚಾಲಕ ನಿಕೇಶ್ ಉಬರಡ್ಕ ಪ್ರತಿಜ್ಞೆ ಬೋಧಿಸಿದರು. ನಗರ ಸಂಚಾಲಕ ದೀಕ್ಷಿತ್ ಪಾನತ್ತಿಲ ವೇದಿಕೆಯಲ್ಲಿದ್ದರು. ನಗರ ಕಾರ್ಯದರ್ಶಿ ಪ್ರವೀಣ್ ಜಯನಗರ ಸ್ವಾಗತಿಸಿ, ತಿರ್ಥೇಶ್ ವಂದಿಸಿದರು. ಸುಮಿತ್ ವಂದೆ ಮಾತರಂ ಹಾಡಿದರು. ಗಿರೀಶ್ ಕುಂಠಿನಿ ಕಾರ್ಯಕ್ರಮ ನಿರೂಪಿಸಿದರು.

ಇದಕ್ಕೂ ಮುನ್ನ ನಗರದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸುಳ್ಯ ಜ್ಯೋತಿ ವೃತ್ತದ ಬಳಿಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ಗಾಂಧಿನಗರಕ್ಕೆ ತೆರಳಿ ಅಲ್ಲಿಂದ ಹಿಂತಿರುಗಿ ಖಾಸಗೀ ಬಸ್ ನಿಲ್ದಾಣದ ಬಳಿಯಲ್ಲಿರುವ ಶಿವಕೃಪಾ ಕಲಾ ಮಂದಿರದಲ್ಲಿ ಸಮಾಪನಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

2 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

2 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

13 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

13 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

17 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago