ಸುಳ್ಯ: ತ್ರಿಖಂಡವಾದ ಭಾರತ ಮತ್ತೆ ಒಂದಾಗಬೇಕು ಎಂಬ ಸಂಕಲ್ಪದೊಂದಿಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ ಪ್ರಖಂಡ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ ಮತ್ತು ಪಂಜಿನ ಮೆರವಣಿಗೆ ಸುಳ್ಯದಲ್ಲಿ ನಡೆಯಿತು.
ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ ಅಧ್ಯಕ್ಷ ತೆ ವಹಿಸಿದ್ದರು. ನ್ಯಾಯವಾದಿ ಪ್ರಜ್ವಲ್ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು. ನಿವೃತ್ತ ಸೈನಿಕ ಎ.ವಿ.ಶಿವಲಿಂಗೇ ಗೌಡ ಮುಖ್ಯ ಅತಿಥಿಯಾಗಿದ್ದರು.
ಭಜರಂಗದಳ ತಾಲೂಕು ಸಂಚಾಲಕ ನಿಕೇಶ್ ಉಬರಡ್ಕ ಪ್ರತಿಜ್ಞೆ ಬೋಧಿಸಿದರು. ನಗರ ಸಂಚಾಲಕ ದೀಕ್ಷಿತ್ ಪಾನತ್ತಿಲ ವೇದಿಕೆಯಲ್ಲಿದ್ದರು. ನಗರ ಕಾರ್ಯದರ್ಶಿ ಪ್ರವೀಣ್ ಜಯನಗರ ಸ್ವಾಗತಿಸಿ, ತಿರ್ಥೇಶ್ ವಂದಿಸಿದರು. ಸುಮಿತ್ ವಂದೆ ಮಾತರಂ ಹಾಡಿದರು. ಗಿರೀಶ್ ಕುಂಠಿನಿ ಕಾರ್ಯಕ್ರಮ ನಿರೂಪಿಸಿದರು.
ಇದಕ್ಕೂ ಮುನ್ನ ನಗರದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸುಳ್ಯ ಜ್ಯೋತಿ ವೃತ್ತದ ಬಳಿಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ಗಾಂಧಿನಗರಕ್ಕೆ ತೆರಳಿ ಅಲ್ಲಿಂದ ಹಿಂತಿರುಗಿ ಖಾಸಗೀ ಬಸ್ ನಿಲ್ದಾಣದ ಬಳಿಯಲ್ಲಿರುವ ಶಿವಕೃಪಾ ಕಲಾ ಮಂದಿರದಲ್ಲಿ ಸಮಾಪನಗೊಂಡಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…