ಸುಳ್ಯ: ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗದ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಬಿಜೆಪಿ ವತಿಯಿಂದ ಚುನಾಯಿತರಾದ ಜನಪ್ರತಿನಿಧಿಗಳು ತೆಗೆದುಕೊಂಡಿರುವ ಅಸಹಕಾರ ಚಳವಳಿಯನ್ನು ಕೈಬಿಟ್ಟು ಕ್ಷೇತ್ರದ ತಮ್ಮ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಸತತ 6 ಬಾರಿ ಚುನಾಯಿತರಾಗಿರುವ ಸುಳ್ಯ ಕ್ಷೇತ್ರದ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕ್ಷೇತ್ರದ ಸಂಘಟನೆಯ ಹಾಗೂ ಜನಸಾಮಾನ್ಯರ ಬೇಡಿಕೆ ಯಾಗಿತ್ತು. ಆದರೆ ಲಭ್ಯವಾಗದ ಹಿನ್ನೆಲೆಯಲ್ಲಿ ಬಿಜೆಪಿಯು ಸುಳ್ಯದಲ್ಲಿ ಅಸಹಕಾರ ಚಳುವಳಿ ಘೋಷಣೆ ಮಾಡಿತ್ತು. ಬಗ್ಗೆ ಇದೀಗ ಮುಖ್ಯಮಂತ್ರಿಗಳ ಬಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಸುಳ್ಯದ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ನಿಯೋಗ ಹೋಗುವುದೆಂದು ತೀರ್ಮಾನಿಸಲಾಗಿದ್ದಾರೆ. ಈ ಬಗ್ಗೆ ಸೆ.14 ರಂದು ನಿಯೋಗ ತೆರಳಲಿದೆ.
ಇದೀಗ ಬಿಜೆಪಿ ರಾಜ್ಯಾಧ್ಯಕ್ಷರು ಸೂಕ್ತ ಭರವಸೆಯನ್ನು ನೀಡಿರುವುದರಿಂದ, ಸುಳ್ಯ ಕ್ಷೇತ್ರದಲ್ಲಿ ಚುನಾಯಿತರಾದ ಬಿಜೆಪಿ ಜನಪ್ರತಿನಿಧಿಗಳು ತೆಗೆದುಕೊಂಡಿರುವ ಅಸಹಕಾರ ಚಳವಳಿಯನ್ನು ಕೈಬಿಟ್ಟು ಕ್ಷೇತ್ರದಲ್ಲಿ ತಮ್ಮ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಮಂಡಲ ಸಮಿತಿಯಿಂದ ತೀರ್ಮಾನಿಸಲಾಗಿರುತ್ತದೆ ಎಂದು ಮಂಡಲ ಬಿಜೆಪಿಯು ಜನಪ್ರತಿನಿಧಿಗಳಿಗೆ ತಿಳಿಸಿದೆ ಎಂದು ತಿಳಿದುಬಂದಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…