ಸುಳ್ಯ: ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗದ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಬಿಜೆಪಿ ವತಿಯಿಂದ ಚುನಾಯಿತರಾದ ಜನಪ್ರತಿನಿಧಿಗಳು ತೆಗೆದುಕೊಂಡಿರುವ ಅಸಹಕಾರ ಚಳವಳಿಯನ್ನು ಕೈಬಿಟ್ಟು ಕ್ಷೇತ್ರದ ತಮ್ಮ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಸತತ 6 ಬಾರಿ ಚುನಾಯಿತರಾಗಿರುವ ಸುಳ್ಯ ಕ್ಷೇತ್ರದ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕ್ಷೇತ್ರದ ಸಂಘಟನೆಯ ಹಾಗೂ ಜನಸಾಮಾನ್ಯರ ಬೇಡಿಕೆ ಯಾಗಿತ್ತು. ಆದರೆ ಲಭ್ಯವಾಗದ ಹಿನ್ನೆಲೆಯಲ್ಲಿ ಬಿಜೆಪಿಯು ಸುಳ್ಯದಲ್ಲಿ ಅಸಹಕಾರ ಚಳುವಳಿ ಘೋಷಣೆ ಮಾಡಿತ್ತು. ಬಗ್ಗೆ ಇದೀಗ ಮುಖ್ಯಮಂತ್ರಿಗಳ ಬಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಸುಳ್ಯದ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ನಿಯೋಗ ಹೋಗುವುದೆಂದು ತೀರ್ಮಾನಿಸಲಾಗಿದ್ದಾರೆ. ಈ ಬಗ್ಗೆ ಸೆ.14 ರಂದು ನಿಯೋಗ ತೆರಳಲಿದೆ.
ಇದೀಗ ಬಿಜೆಪಿ ರಾಜ್ಯಾಧ್ಯಕ್ಷರು ಸೂಕ್ತ ಭರವಸೆಯನ್ನು ನೀಡಿರುವುದರಿಂದ, ಸುಳ್ಯ ಕ್ಷೇತ್ರದಲ್ಲಿ ಚುನಾಯಿತರಾದ ಬಿಜೆಪಿ ಜನಪ್ರತಿನಿಧಿಗಳು ತೆಗೆದುಕೊಂಡಿರುವ ಅಸಹಕಾರ ಚಳವಳಿಯನ್ನು ಕೈಬಿಟ್ಟು ಕ್ಷೇತ್ರದಲ್ಲಿ ತಮ್ಮ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಮಂಡಲ ಸಮಿತಿಯಿಂದ ತೀರ್ಮಾನಿಸಲಾಗಿರುತ್ತದೆ ಎಂದು ಮಂಡಲ ಬಿಜೆಪಿಯು ಜನಪ್ರತಿನಿಧಿಗಳಿಗೆ ತಿಳಿಸಿದೆ ಎಂದು ತಿಳಿದುಬಂದಿದೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…