ಸುಳ್ಯ: ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗದ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಬಿಜೆಪಿ ವತಿಯಿಂದ ಚುನಾಯಿತರಾದ ಜನಪ್ರತಿನಿಧಿಗಳು ತೆಗೆದುಕೊಂಡಿರುವ ಅಸಹಕಾರ ಚಳವಳಿಯನ್ನು ಕೈಬಿಟ್ಟು ಕ್ಷೇತ್ರದ ತಮ್ಮ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಸತತ 6 ಬಾರಿ ಚುನಾಯಿತರಾಗಿರುವ ಸುಳ್ಯ ಕ್ಷೇತ್ರದ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕ್ಷೇತ್ರದ ಸಂಘಟನೆಯ ಹಾಗೂ ಜನಸಾಮಾನ್ಯರ ಬೇಡಿಕೆ ಯಾಗಿತ್ತು. ಆದರೆ ಲಭ್ಯವಾಗದ ಹಿನ್ನೆಲೆಯಲ್ಲಿ ಬಿಜೆಪಿಯು ಸುಳ್ಯದಲ್ಲಿ ಅಸಹಕಾರ ಚಳುವಳಿ ಘೋಷಣೆ ಮಾಡಿತ್ತು. ಬಗ್ಗೆ ಇದೀಗ ಮುಖ್ಯಮಂತ್ರಿಗಳ ಬಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಸುಳ್ಯದ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ನಿಯೋಗ ಹೋಗುವುದೆಂದು ತೀರ್ಮಾನಿಸಲಾಗಿದ್ದಾರೆ. ಈ ಬಗ್ಗೆ ಸೆ.14 ರಂದು ನಿಯೋಗ ತೆರಳಲಿದೆ.
ಇದೀಗ ಬಿಜೆಪಿ ರಾಜ್ಯಾಧ್ಯಕ್ಷರು ಸೂಕ್ತ ಭರವಸೆಯನ್ನು ನೀಡಿರುವುದರಿಂದ, ಸುಳ್ಯ ಕ್ಷೇತ್ರದಲ್ಲಿ ಚುನಾಯಿತರಾದ ಬಿಜೆಪಿ ಜನಪ್ರತಿನಿಧಿಗಳು ತೆಗೆದುಕೊಂಡಿರುವ ಅಸಹಕಾರ ಚಳವಳಿಯನ್ನು ಕೈಬಿಟ್ಟು ಕ್ಷೇತ್ರದಲ್ಲಿ ತಮ್ಮ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಮಂಡಲ ಸಮಿತಿಯಿಂದ ತೀರ್ಮಾನಿಸಲಾಗಿರುತ್ತದೆ ಎಂದು ಮಂಡಲ ಬಿಜೆಪಿಯು ಜನಪ್ರತಿನಿಧಿಗಳಿಗೆ ತಿಳಿಸಿದೆ ಎಂದು ತಿಳಿದುಬಂದಿದೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…