ಸುಳ್ಯ: ಸುಳ್ಯದಲ್ಲಿ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಗುಡುಗು ಸಿಡಿಲಿನೊಂದಿಗೆ ಆರಂಭಗೊಂಡ ಧಾರಾಕಾರ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿಯಿತು. ನಿರಂತರ ಎರಡನೇ ದಿನ ಸುಳ್ಯದಲ್ಲಿ ಉತ್ತಮ ಮಳೆಯಾಗಿದೆ.
ಮಳೆಯ ಜೊತೆಗೆ ಬೀಸಿದ ಗಾಳಿಗೆ ತಾಲೂಕಿನ ವಿವಿಧೆಡೆ ಮನೆಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ. ನಗರ ಸಮೀಪದ ಬೆಟ್ಟಂಪಾಡಿ, ಜಯನಗರಗಳಲ್ಲಿ ಏಳು ಮನೆಗಳಿಗೆ ಹಾನಿ ಸಂಭವಿಸಿದೆ. ಬೆಟ್ಟಂಪಾಡಿಯ ಬಾಲಕೃಷ್ಣ ಎಂಬವರ ಮನೆಯ ಮೇಲ್ಚಾವಣಿ ಗಾಳಿಗೆ ಹಾರಿ ಹೋಗಿದ್ದು ಮನೆಗೆ ಸಂಪೂರ್ಣ ಹಾನಿಯಾಗಿದೆ. ಅಲ್ಲದೆ ಸಮೀಪದ ಇತರ ಮನೆಗಳಿಗೂ ಅಲ್ಲಲ್ಲಿ ಹಾನಿ ಸಂಭವಿಸಿದೆ. ಮನೆಯ ಶೀಟ್ಗಳು ಹಾರಿ ಹೋಗಿದೆ.
ಅಜ್ಜಾವರ ಗ್ರಾಮದಲ್ಲಿಯೂ ಮನೆಗಳಿಗೂ, ಬಸ್ ನಿಲ್ದಾಣಕ್ಕೆ ಹಾನಿ ಸಂಭವಿಸಿದೆ. ಸೋಣಂಗೇರಿಯಲ್ಲಿ ರಸ್ತೆಗೆ ಅಡ್ಡಲಾಗಿ ಮರ ಮುರಿದು ಬಿದ್ದಿದೆ. ಮಳೆ ಮತ್ತು ಗಾಳಿಯಿಂದ ಸುಳ್ಯಕ್ಕೆ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಗಾಳಿಗೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಕಡಿತಗೊಂಡಿದೆ.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…