ಸುಳ್ಯ: ಸುಳ್ಯದಲ್ಲಿ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಗುಡುಗು ಸಿಡಿಲಿನೊಂದಿಗೆ ಆರಂಭಗೊಂಡ ಧಾರಾಕಾರ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿಯಿತು. ನಿರಂತರ ಎರಡನೇ ದಿನ ಸುಳ್ಯದಲ್ಲಿ ಉತ್ತಮ ಮಳೆಯಾಗಿದೆ.
ಮಳೆಯ ಜೊತೆಗೆ ಬೀಸಿದ ಗಾಳಿಗೆ ತಾಲೂಕಿನ ವಿವಿಧೆಡೆ ಮನೆಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ. ನಗರ ಸಮೀಪದ ಬೆಟ್ಟಂಪಾಡಿ, ಜಯನಗರಗಳಲ್ಲಿ ಏಳು ಮನೆಗಳಿಗೆ ಹಾನಿ ಸಂಭವಿಸಿದೆ. ಬೆಟ್ಟಂಪಾಡಿಯ ಬಾಲಕೃಷ್ಣ ಎಂಬವರ ಮನೆಯ ಮೇಲ್ಚಾವಣಿ ಗಾಳಿಗೆ ಹಾರಿ ಹೋಗಿದ್ದು ಮನೆಗೆ ಸಂಪೂರ್ಣ ಹಾನಿಯಾಗಿದೆ. ಅಲ್ಲದೆ ಸಮೀಪದ ಇತರ ಮನೆಗಳಿಗೂ ಅಲ್ಲಲ್ಲಿ ಹಾನಿ ಸಂಭವಿಸಿದೆ. ಮನೆಯ ಶೀಟ್ಗಳು ಹಾರಿ ಹೋಗಿದೆ.
ಅಜ್ಜಾವರ ಗ್ರಾಮದಲ್ಲಿಯೂ ಮನೆಗಳಿಗೂ, ಬಸ್ ನಿಲ್ದಾಣಕ್ಕೆ ಹಾನಿ ಸಂಭವಿಸಿದೆ. ಸೋಣಂಗೇರಿಯಲ್ಲಿ ರಸ್ತೆಗೆ ಅಡ್ಡಲಾಗಿ ಮರ ಮುರಿದು ಬಿದ್ದಿದೆ. ಮಳೆ ಮತ್ತು ಗಾಳಿಯಿಂದ ಸುಳ್ಯಕ್ಕೆ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಗಾಳಿಗೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಕಡಿತಗೊಂಡಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…