ಸುಳ್ಯ: ಸುಳ್ಯದಲ್ಲಿ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಗುಡುಗು ಸಿಡಿಲಿನೊಂದಿಗೆ ಆರಂಭಗೊಂಡ ಧಾರಾಕಾರ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿಯಿತು. ನಿರಂತರ ಎರಡನೇ ದಿನ ಸುಳ್ಯದಲ್ಲಿ ಉತ್ತಮ ಮಳೆಯಾಗಿದೆ.
ಮಳೆಯ ಜೊತೆಗೆ ಬೀಸಿದ ಗಾಳಿಗೆ ತಾಲೂಕಿನ ವಿವಿಧೆಡೆ ಮನೆಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ. ನಗರ ಸಮೀಪದ ಬೆಟ್ಟಂಪಾಡಿ, ಜಯನಗರಗಳಲ್ಲಿ ಏಳು ಮನೆಗಳಿಗೆ ಹಾನಿ ಸಂಭವಿಸಿದೆ. ಬೆಟ್ಟಂಪಾಡಿಯ ಬಾಲಕೃಷ್ಣ ಎಂಬವರ ಮನೆಯ ಮೇಲ್ಚಾವಣಿ ಗಾಳಿಗೆ ಹಾರಿ ಹೋಗಿದ್ದು ಮನೆಗೆ ಸಂಪೂರ್ಣ ಹಾನಿಯಾಗಿದೆ. ಅಲ್ಲದೆ ಸಮೀಪದ ಇತರ ಮನೆಗಳಿಗೂ ಅಲ್ಲಲ್ಲಿ ಹಾನಿ ಸಂಭವಿಸಿದೆ. ಮನೆಯ ಶೀಟ್ಗಳು ಹಾರಿ ಹೋಗಿದೆ.
ಅಜ್ಜಾವರ ಗ್ರಾಮದಲ್ಲಿಯೂ ಮನೆಗಳಿಗೂ, ಬಸ್ ನಿಲ್ದಾಣಕ್ಕೆ ಹಾನಿ ಸಂಭವಿಸಿದೆ. ಸೋಣಂಗೇರಿಯಲ್ಲಿ ರಸ್ತೆಗೆ ಅಡ್ಡಲಾಗಿ ಮರ ಮುರಿದು ಬಿದ್ದಿದೆ. ಮಳೆ ಮತ್ತು ಗಾಳಿಯಿಂದ ಸುಳ್ಯಕ್ಕೆ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಗಾಳಿಗೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಕಡಿತಗೊಂಡಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…