ಸುಳ್ಯ: ಸುಳ್ಯದಲ್ಲಿ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಗುಡುಗು ಸಿಡಿಲಿನೊಂದಿಗೆ ಆರಂಭಗೊಂಡ ಧಾರಾಕಾರ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿಯಿತು. ನಿರಂತರ ಎರಡನೇ ದಿನ ಸುಳ್ಯದಲ್ಲಿ ಉತ್ತಮ ಮಳೆಯಾಗಿದೆ.
ಮಳೆಯ ಜೊತೆಗೆ ಬೀಸಿದ ಗಾಳಿಗೆ ತಾಲೂಕಿನ ವಿವಿಧೆಡೆ ಮನೆಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ. ನಗರ ಸಮೀಪದ ಬೆಟ್ಟಂಪಾಡಿ, ಜಯನಗರಗಳಲ್ಲಿ ಏಳು ಮನೆಗಳಿಗೆ ಹಾನಿ ಸಂಭವಿಸಿದೆ. ಬೆಟ್ಟಂಪಾಡಿಯ ಬಾಲಕೃಷ್ಣ ಎಂಬವರ ಮನೆಯ ಮೇಲ್ಚಾವಣಿ ಗಾಳಿಗೆ ಹಾರಿ ಹೋಗಿದ್ದು ಮನೆಗೆ ಸಂಪೂರ್ಣ ಹಾನಿಯಾಗಿದೆ. ಅಲ್ಲದೆ ಸಮೀಪದ ಇತರ ಮನೆಗಳಿಗೂ ಅಲ್ಲಲ್ಲಿ ಹಾನಿ ಸಂಭವಿಸಿದೆ. ಮನೆಯ ಶೀಟ್ಗಳು ಹಾರಿ ಹೋಗಿದೆ.
ಅಜ್ಜಾವರ ಗ್ರಾಮದಲ್ಲಿಯೂ ಮನೆಗಳಿಗೂ, ಬಸ್ ನಿಲ್ದಾಣಕ್ಕೆ ಹಾನಿ ಸಂಭವಿಸಿದೆ. ಸೋಣಂಗೇರಿಯಲ್ಲಿ ರಸ್ತೆಗೆ ಅಡ್ಡಲಾಗಿ ಮರ ಮುರಿದು ಬಿದ್ದಿದೆ. ಮಳೆ ಮತ್ತು ಗಾಳಿಯಿಂದ ಸುಳ್ಯಕ್ಕೆ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಗಾಳಿಗೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಕಡಿತಗೊಂಡಿದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…