ಸುಳ್ಯ: ಸುಳ್ಯದಲ್ಲಿ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಗುಡುಗು ಸಿಡಿಲಿನೊಂದಿಗೆ ಆರಂಭಗೊಂಡ ಧಾರಾಕಾರ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿಯಿತು. ನಿರಂತರ ಎರಡನೇ ದಿನ ಸುಳ್ಯದಲ್ಲಿ ಉತ್ತಮ ಮಳೆಯಾಗಿದೆ.
ಮಳೆಯ ಜೊತೆಗೆ ಬೀಸಿದ ಗಾಳಿಗೆ ತಾಲೂಕಿನ ವಿವಿಧೆಡೆ ಮನೆಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ. ನಗರ ಸಮೀಪದ ಬೆಟ್ಟಂಪಾಡಿ, ಜಯನಗರಗಳಲ್ಲಿ ಏಳು ಮನೆಗಳಿಗೆ ಹಾನಿ ಸಂಭವಿಸಿದೆ. ಬೆಟ್ಟಂಪಾಡಿಯ ಬಾಲಕೃಷ್ಣ ಎಂಬವರ ಮನೆಯ ಮೇಲ್ಚಾವಣಿ ಗಾಳಿಗೆ ಹಾರಿ ಹೋಗಿದ್ದು ಮನೆಗೆ ಸಂಪೂರ್ಣ ಹಾನಿಯಾಗಿದೆ. ಅಲ್ಲದೆ ಸಮೀಪದ ಇತರ ಮನೆಗಳಿಗೂ ಅಲ್ಲಲ್ಲಿ ಹಾನಿ ಸಂಭವಿಸಿದೆ. ಮನೆಯ ಶೀಟ್ಗಳು ಹಾರಿ ಹೋಗಿದೆ.
ಅಜ್ಜಾವರ ಗ್ರಾಮದಲ್ಲಿಯೂ ಮನೆಗಳಿಗೂ, ಬಸ್ ನಿಲ್ದಾಣಕ್ಕೆ ಹಾನಿ ಸಂಭವಿಸಿದೆ. ಸೋಣಂಗೇರಿಯಲ್ಲಿ ರಸ್ತೆಗೆ ಅಡ್ಡಲಾಗಿ ಮರ ಮುರಿದು ಬಿದ್ದಿದೆ. ಮಳೆ ಮತ್ತು ಗಾಳಿಯಿಂದ ಸುಳ್ಯಕ್ಕೆ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಗಾಳಿಗೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಕಡಿತಗೊಂಡಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…