ಸುಳ್ಯ: ಸುಳ್ಯದಲ್ಲಿ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಗುಡುಗು ಸಿಡಿಲಿನೊಂದಿಗೆ ಆರಂಭಗೊಂಡ ಧಾರಾಕಾರ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿಯಿತು. ನಿರಂತರ ಎರಡನೇ ದಿನ ಸುಳ್ಯದಲ್ಲಿ ಉತ್ತಮ ಮಳೆಯಾಗಿದೆ.
ಮಳೆಯ ಜೊತೆಗೆ ಬೀಸಿದ ಗಾಳಿಗೆ ತಾಲೂಕಿನ ವಿವಿಧೆಡೆ ಮನೆಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ. ನಗರ ಸಮೀಪದ ಬೆಟ್ಟಂಪಾಡಿ, ಜಯನಗರಗಳಲ್ಲಿ ಏಳು ಮನೆಗಳಿಗೆ ಹಾನಿ ಸಂಭವಿಸಿದೆ. ಬೆಟ್ಟಂಪಾಡಿಯ ಬಾಲಕೃಷ್ಣ ಎಂಬವರ ಮನೆಯ ಮೇಲ್ಚಾವಣಿ ಗಾಳಿಗೆ ಹಾರಿ ಹೋಗಿದ್ದು ಮನೆಗೆ ಸಂಪೂರ್ಣ ಹಾನಿಯಾಗಿದೆ. ಅಲ್ಲದೆ ಸಮೀಪದ ಇತರ ಮನೆಗಳಿಗೂ ಅಲ್ಲಲ್ಲಿ ಹಾನಿ ಸಂಭವಿಸಿದೆ. ಮನೆಯ ಶೀಟ್ಗಳು ಹಾರಿ ಹೋಗಿದೆ.
ಅಜ್ಜಾವರ ಗ್ರಾಮದಲ್ಲಿಯೂ ಮನೆಗಳಿಗೂ, ಬಸ್ ನಿಲ್ದಾಣಕ್ಕೆ ಹಾನಿ ಸಂಭವಿಸಿದೆ. ಸೋಣಂಗೇರಿಯಲ್ಲಿ ರಸ್ತೆಗೆ ಅಡ್ಡಲಾಗಿ ಮರ ಮುರಿದು ಬಿದ್ದಿದೆ. ಮಳೆ ಮತ್ತು ಗಾಳಿಯಿಂದ ಸುಳ್ಯಕ್ಕೆ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಗಾಳಿಗೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿದೆ. ಸಂಜೆ ನಾಲ್ಕು ಗಂಟೆಯ ವೇಳೆಗೆ ಕಡಿತಗೊಂಡಿದೆ.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…