ಸುಳ್ಯ: ಸುಳ್ಯದ ರೋಟರಿ ಕ್ಲಬ್ ಮತ್ತು ಸುಳ್ಯದ ರೋಟರಿ ಕ್ಲಬ್ ಸಿಟಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಮಿತ್ತಡ್ಕದ ರೋಟರಿ ವಿದ್ಯಾಸಂಸ್ಥೆಗಳ ವಠಾರದಲ್ಲಿ ಎರಡು ದಿನಗಳ ಇಂಟರಾಕ್ಟ್ ಕ್ಲಬ್ಗಳ ಜಿಲ್ಲಾ ಸಮಾವೇಶ `ಚಿನ್ನಾರಿ’ ನಡೆಯಿತು.
ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯೂ ‘ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವವನ್ನು ಬೆಳೆಸಿಕೊಳ್ಳಲು ಇಂಟರಾಕ್ಟ್ ಪೂರಕವಾಗಿ ಕೆಲಸ ಮಾಡುತ್ತದೆ. ಆ ಮೂಲಕ ಸಮಾಜಮುಖಿಯಾಗಿ ತೊಡಗಿಸಿಕೊಳ್ಳಲು ಇದು ಸಹಕಾರಿಯಾಗುತ್ತದೆ ಎಂದು ಹೇಳಿದರು. ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿ ತುಷಾರ್ ಕೆ., ರೋಟರಿ ವಲಯ 5ರ ಅಸಿಸ್ಟೆಂಟ್ ಗವರ್ನರ್ ಡಾ. ಕೇಶವ ಪಿ.ಕೆ. ಜಿಲ್ಲಾ ಇಂಟರಾಕ್ಟ್ ಸಭಾಪತಿ ಡಾ. ಸೂರ್ಯನಾರಾಯಣ ಅತಿಥಿಗಳಾಗಿ ಭಾಗವಹಿಸಿದರು.
ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ. ಪುರುಷೋತ್ತಮ ಸ್ವಾಗತಿಸಿದರು. ಸಮಾವೇಶದ ಸಂಯೋಜಕ ಎನ್.ಎ.ಜಿತೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಳ್ಯ ಸಿಟಿ ಕ್ಲಬ್ ಅಧ್ಯಕ್ಷ ಭಾನುಪ್ರಕಾಶ್ ವಂದಿಸಿದರು. ವಿದ್ಯಾರ್ಥಿಗಳಾದ ದೃತಿ ಕೆ.ಹೆಚ್, ಸಂಹಿತಾ ವಿ.ಆರ್. ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ಅಚ್ಚುತ ಅಟ್ಲೂರು ಸಹಕಾರ ನೀಡಿದರು.
ಇಂಟರಾಕ್ಟ್ ಜಿಲ್ಲಾ ಉಪ ಸಭಾಪತಿ ನವೀನ್ ಕುಮಾರ್, ಸುಳ್ಯ ರೋಟರಿ ಕಾರ್ಯದರ್ಶಿ ಸನತ್, ಇಂಟರಾಕ್ಟ್ ಅಧ್ಯಕ್ಷೆ ಶ್ರಾವ್ಯ ಬೇರಿಕೆ, ಕಾರ್ಯದರ್ಶಿ ಮಹಿಮಾ ವೇದಿಕೆಯಲ್ಲಿದ್ದರು.
ಉದ್ಘಾಟನೆಯ ಬಳಿಕ ವ್ಯಕ್ತಿತ್ವ ವಿಕಸನ ಹಾಗೂ ಸಂವಹನ ಕಲೆ ವಿಷಯವಾಗಿ ಎಂ.ಬಿ.ಜಯರಾಮರು ಮಾಹಿತಿ ನೀಡಿದರು.
ಡಿ.14ರಂದು ಆರಂಭಗೊಂಡ ಸಮಾವೇಶದಲ್ಲಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆಯಿತು. ಮಿಸೆಸ್ ಕರ್ನಾಟಕ ಪ್ರಶಸ್ತಿ ವಿಜೇತೆ ದೀಪಿಕಾ ಅಡ್ತಲೆ ಉದ್ಘಾಟನೆ ನೆರವೇರಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…