ಸುದ್ದಿಗಳು

ಸುಳ್ಯದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡಬೇಕು ಎಂಬ ನೆಲೆಯಲ್ಲಿ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಇಂದಿರಾ ಕ್ಯಾಂಟೀನ್ ಸುಳ್ಯ ತಾಲೂಕು ಕಚೇರಿ ಸಮೀಪ ಗುರುವಾರ ಕಾರ್ಯಾರಂಭ ಮಾಡಿದೆ.

Advertisement

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ಮತ್ತು ಇತರ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು. ಬೆಳಗ್ಗೆ 7.30ರಿಂದ ರಾತ್ರಿ 8 ಗಂಟೆ ತನಕ ಕ್ಯಾಂಟೀನ್ ತೆರೆದಿರುತ್ತದೆ. 10 ರೂಗೆ ಊಟ ಮತ್ತು ಐದು ರೂಗೆ ಉಪಹಾರವನ್ನು ನೀಡಲಾಗುತ್ತದೆ. ಬೆಳಗ್ಗೆ 7.30ರಿಂದ 10ರ ತನಕ ಉಪಹಾರದ ಸಮಯ. ಇಡ್ಲಿ, ಸಾಂಬಾರ್, ರೈಸ್ ಬಾತ್, ವಾಂಗಿ ಬಾತ್ ಮತ್ತಿತರ ಉಪಹಾರ ಇರಲಿದೆ. ಮಧ್ಯಾಹ್ನ 12.30 ರಿಂದ 3 ಗಂಟೆ ವರೆಗೆ ಊಟದ ಸಮಯ ಅನ್ನ, ಸಾಂಬಾರ್, ಪಲ್ಯ, ಉಪ್ಪಿನ ಕಾಯಿ ಮೆನು ಇರಲಿದೆ. ಸಂಜೆ 5.30 ರಿಂದ 8 ಗಂಟೆ ತನಕ ಸಂಜೆಯ ಉಪಹಾರದ ಸಮಯ ರೈಸ್ ಬಾತ್, ವಾಂಗಿ ಬಾತ್ ಪುಳಿಯೊಗರೆ ಮತ್ತಿತರ ರೈಸ್ ಐಟಂ ಇರಲಿದೆ ಎಂದು ಇಂದಿರಾ ಕ್ಯಾಂಟೀನ್‍ನ ವ್ಯವಸ್ಥಾಪಕ ಕ್ಯಾಪ್ಟನ್ ಗೌರಿ ಶಂಕರ ಪ್ರಸಾದ್ ತಿಳಿಸಿದ್ದಾರೆ. ಗುರುವಾರದಿಂದಲೇ ಕ್ಯಾಂಟೀನ್‍ನಲ್ಲಿ ಊಟ ಮತ್ತು ಉಪಹಾರ ವಿತರಣೆ ಆರಂಭಗೊಂಡಿದೆ. ಉದ್ಘಾಟನೆ ಪ್ರಯುಕ್ತ ನಿನ್ನೆ ಬೆಳಗ್ಗೆ ಉಪಹಾರವನ್ನು ಎಲ್ಲರಿಗೂ ಉಚಿತವಾಗಿ ನೀಡಲಾಯತು. ಬಳಿಕ ಕ್ಯಾಂಟೀನ್‍ನಲ್ಲಿ ವ್ಯಾಪಾರ ಆರಂಭಗೊಂಡಿದೆ.

ವಾರದ ಎಲ್ಲಾ ದಿನವೂ ಕ್ಯಾಂಟೀನ್ ಕಾರ್ಯಾಚರಿಸಲಿದೆ. ಪಾರ್ಸೆಲ್ ನೀಡುವುದಿಲ್ಲ. ಆಸ್ಪತ್ರೆಗಗಳ ಒಳ ರೋಗಿಗಳಿಗೆ ಮಾತ್ರ ಪಾತ್ರ ತಂದಲ್ಲಿ ಊಟ ಉಪಹಾರವನ್ನು ಪಾರ್ಸೆಲ್ ನೀಡಲಾಗುವುದು ಎಂದು ಜಿ.ಎಸ್.ಪ್ರಸಾದ್ ತಿಳಿಸಿದರು.

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

4 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

12 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

12 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

20 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

22 hours ago