Advertisement
ಸುದ್ದಿಗಳು

ಸುಳ್ಯದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Share

ಸುಳ್ಯ: ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡಬೇಕು ಎಂಬ ನೆಲೆಯಲ್ಲಿ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಇಂದಿರಾ ಕ್ಯಾಂಟೀನ್ ಸುಳ್ಯ ತಾಲೂಕು ಕಚೇರಿ ಸಮೀಪ ಗುರುವಾರ ಕಾರ್ಯಾರಂಭ ಮಾಡಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ಮತ್ತು ಇತರ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು. ಬೆಳಗ್ಗೆ 7.30ರಿಂದ ರಾತ್ರಿ 8 ಗಂಟೆ ತನಕ ಕ್ಯಾಂಟೀನ್ ತೆರೆದಿರುತ್ತದೆ. 10 ರೂಗೆ ಊಟ ಮತ್ತು ಐದು ರೂಗೆ ಉಪಹಾರವನ್ನು ನೀಡಲಾಗುತ್ತದೆ. ಬೆಳಗ್ಗೆ 7.30ರಿಂದ 10ರ ತನಕ ಉಪಹಾರದ ಸಮಯ. ಇಡ್ಲಿ, ಸಾಂಬಾರ್, ರೈಸ್ ಬಾತ್, ವಾಂಗಿ ಬಾತ್ ಮತ್ತಿತರ ಉಪಹಾರ ಇರಲಿದೆ. ಮಧ್ಯಾಹ್ನ 12.30 ರಿಂದ 3 ಗಂಟೆ ವರೆಗೆ ಊಟದ ಸಮಯ ಅನ್ನ, ಸಾಂಬಾರ್, ಪಲ್ಯ, ಉಪ್ಪಿನ ಕಾಯಿ ಮೆನು ಇರಲಿದೆ. ಸಂಜೆ 5.30 ರಿಂದ 8 ಗಂಟೆ ತನಕ ಸಂಜೆಯ ಉಪಹಾರದ ಸಮಯ ರೈಸ್ ಬಾತ್, ವಾಂಗಿ ಬಾತ್ ಪುಳಿಯೊಗರೆ ಮತ್ತಿತರ ರೈಸ್ ಐಟಂ ಇರಲಿದೆ ಎಂದು ಇಂದಿರಾ ಕ್ಯಾಂಟೀನ್‍ನ ವ್ಯವಸ್ಥಾಪಕ ಕ್ಯಾಪ್ಟನ್ ಗೌರಿ ಶಂಕರ ಪ್ರಸಾದ್ ತಿಳಿಸಿದ್ದಾರೆ. ಗುರುವಾರದಿಂದಲೇ ಕ್ಯಾಂಟೀನ್‍ನಲ್ಲಿ ಊಟ ಮತ್ತು ಉಪಹಾರ ವಿತರಣೆ ಆರಂಭಗೊಂಡಿದೆ. ಉದ್ಘಾಟನೆ ಪ್ರಯುಕ್ತ ನಿನ್ನೆ ಬೆಳಗ್ಗೆ ಉಪಹಾರವನ್ನು ಎಲ್ಲರಿಗೂ ಉಚಿತವಾಗಿ ನೀಡಲಾಯತು. ಬಳಿಕ ಕ್ಯಾಂಟೀನ್‍ನಲ್ಲಿ ವ್ಯಾಪಾರ ಆರಂಭಗೊಂಡಿದೆ.

ವಾರದ ಎಲ್ಲಾ ದಿನವೂ ಕ್ಯಾಂಟೀನ್ ಕಾರ್ಯಾಚರಿಸಲಿದೆ. ಪಾರ್ಸೆಲ್ ನೀಡುವುದಿಲ್ಲ. ಆಸ್ಪತ್ರೆಗಗಳ ಒಳ ರೋಗಿಗಳಿಗೆ ಮಾತ್ರ ಪಾತ್ರ ತಂದಲ್ಲಿ ಊಟ ಉಪಹಾರವನ್ನು ಪಾರ್ಸೆಲ್ ನೀಡಲಾಗುವುದು ಎಂದು ಜಿ.ಎಸ್.ಪ್ರಸಾದ್ ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

7 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

14 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

14 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

14 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

14 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

14 hours ago