Advertisement
ಸುದ್ದಿಗಳು

ಸುಳ್ಯದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Share

ಸುಳ್ಯ: ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡಬೇಕು ಎಂಬ ನೆಲೆಯಲ್ಲಿ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಇಂದಿರಾ ಕ್ಯಾಂಟೀನ್ ಸುಳ್ಯ ತಾಲೂಕು ಕಚೇರಿ ಸಮೀಪ ಗುರುವಾರ ಕಾರ್ಯಾರಂಭ ಮಾಡಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ಮತ್ತು ಇತರ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು. ಬೆಳಗ್ಗೆ 7.30ರಿಂದ ರಾತ್ರಿ 8 ಗಂಟೆ ತನಕ ಕ್ಯಾಂಟೀನ್ ತೆರೆದಿರುತ್ತದೆ. 10 ರೂಗೆ ಊಟ ಮತ್ತು ಐದು ರೂಗೆ ಉಪಹಾರವನ್ನು ನೀಡಲಾಗುತ್ತದೆ. ಬೆಳಗ್ಗೆ 7.30ರಿಂದ 10ರ ತನಕ ಉಪಹಾರದ ಸಮಯ. ಇಡ್ಲಿ, ಸಾಂಬಾರ್, ರೈಸ್ ಬಾತ್, ವಾಂಗಿ ಬಾತ್ ಮತ್ತಿತರ ಉಪಹಾರ ಇರಲಿದೆ. ಮಧ್ಯಾಹ್ನ 12.30 ರಿಂದ 3 ಗಂಟೆ ವರೆಗೆ ಊಟದ ಸಮಯ ಅನ್ನ, ಸಾಂಬಾರ್, ಪಲ್ಯ, ಉಪ್ಪಿನ ಕಾಯಿ ಮೆನು ಇರಲಿದೆ. ಸಂಜೆ 5.30 ರಿಂದ 8 ಗಂಟೆ ತನಕ ಸಂಜೆಯ ಉಪಹಾರದ ಸಮಯ ರೈಸ್ ಬಾತ್, ವಾಂಗಿ ಬಾತ್ ಪುಳಿಯೊಗರೆ ಮತ್ತಿತರ ರೈಸ್ ಐಟಂ ಇರಲಿದೆ ಎಂದು ಇಂದಿರಾ ಕ್ಯಾಂಟೀನ್‍ನ ವ್ಯವಸ್ಥಾಪಕ ಕ್ಯಾಪ್ಟನ್ ಗೌರಿ ಶಂಕರ ಪ್ರಸಾದ್ ತಿಳಿಸಿದ್ದಾರೆ. ಗುರುವಾರದಿಂದಲೇ ಕ್ಯಾಂಟೀನ್‍ನಲ್ಲಿ ಊಟ ಮತ್ತು ಉಪಹಾರ ವಿತರಣೆ ಆರಂಭಗೊಂಡಿದೆ. ಉದ್ಘಾಟನೆ ಪ್ರಯುಕ್ತ ನಿನ್ನೆ ಬೆಳಗ್ಗೆ ಉಪಹಾರವನ್ನು ಎಲ್ಲರಿಗೂ ಉಚಿತವಾಗಿ ನೀಡಲಾಯತು. ಬಳಿಕ ಕ್ಯಾಂಟೀನ್‍ನಲ್ಲಿ ವ್ಯಾಪಾರ ಆರಂಭಗೊಂಡಿದೆ.

ವಾರದ ಎಲ್ಲಾ ದಿನವೂ ಕ್ಯಾಂಟೀನ್ ಕಾರ್ಯಾಚರಿಸಲಿದೆ. ಪಾರ್ಸೆಲ್ ನೀಡುವುದಿಲ್ಲ. ಆಸ್ಪತ್ರೆಗಗಳ ಒಳ ರೋಗಿಗಳಿಗೆ ಮಾತ್ರ ಪಾತ್ರ ತಂದಲ್ಲಿ ಊಟ ಉಪಹಾರವನ್ನು ಪಾರ್ಸೆಲ್ ನೀಡಲಾಗುವುದು ಎಂದು ಜಿ.ಎಸ್.ಪ್ರಸಾದ್ ತಿಳಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

6 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

8 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

8 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

11 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

22 hours ago