ಸುಳ್ಯದಲ್ಲಿ ಇಳೆಗೆ ತಂಪೆರೆದ ಮಳೆ

April 24, 2019
12:01 PM

ಸುಳ್ಯ: ಕಡು ಬಿಸಿಲು ಮತ್ತು ಏರಿದ ತಾಪಮಾನದಿಂದ ಬೆಂದು ಬರಡಾಗಿದ್ದ ಇಳೆಗೆ ತಂಪೆರೆದು ಸುಳ್ಯದಲ್ಲಿ ಮಳೆಯ ಸಿಂಚನ. ಮಂಗಳವಾರ ಸಂಜೆ ಒಂದು ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆ ಸುರಿದಿದೆ. ಐದು ಗಂಟೆಯ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಧಾರಾಕಾರ ಮಳೆ ಸುರಿಯಿತು.
ಸುಳ್ಯ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಳೆ ಸುರಿದು ತಂಪಾದ ವಾತಾವರಣ ಉಂಟಾಗಿದೆ. ಜೋಡುಪಾಲ, ಎರಡನೇ ಮೊಣ್ಣಂಗೇರಿ ಮತ್ತಿತರ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗಿದ್ದು ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಣ್ಣು ಮಿಶ್ರಿತ ಕೆಂಪು ನೀರು ನದಿಯಲ್ಲಿ ಹರಿದು ಬರುತಿದೆ. ಆದರೆ ಪಯಸ್ವಿನಿ ನದಿಯು ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಬತ್ತಿ ಬರಡಾದ ಸ್ಥಿತಿಯಲ್ಲಿದ್ದು ನೀರಿನ ಬವಣೆ ಎದುರಾಗಿತ್ತು. ಇದೀಗ ಉತ್ತಮ ಮಳೆಯಾಗಿರುವ ಕಾರಣ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿ ನೀರಿನ ಬವಣೆಗೆ ದೂರವಾಗಬಹುದು ಎಂಬ ನಿರೀಕ್ಷೆ ಉಂಟಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
August 31, 2026
2:46 PM
by: ಸಾಯಿಶೇಖರ್ ಕರಿಕಳ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror