ಸುಳ್ಯದಲ್ಲಿ ಇಳೆಗೆ ತಂಪೆರೆದ ಮಳೆ

April 24, 2019
12:01 PM

ಸುಳ್ಯ: ಕಡು ಬಿಸಿಲು ಮತ್ತು ಏರಿದ ತಾಪಮಾನದಿಂದ ಬೆಂದು ಬರಡಾಗಿದ್ದ ಇಳೆಗೆ ತಂಪೆರೆದು ಸುಳ್ಯದಲ್ಲಿ ಮಳೆಯ ಸಿಂಚನ. ಮಂಗಳವಾರ ಸಂಜೆ ಒಂದು ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆ ಸುರಿದಿದೆ. ಐದು ಗಂಟೆಯ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಧಾರಾಕಾರ ಮಳೆ ಸುರಿಯಿತು.
ಸುಳ್ಯ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಳೆ ಸುರಿದು ತಂಪಾದ ವಾತಾವರಣ ಉಂಟಾಗಿದೆ. ಜೋಡುಪಾಲ, ಎರಡನೇ ಮೊಣ್ಣಂಗೇರಿ ಮತ್ತಿತರ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗಿದ್ದು ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಣ್ಣು ಮಿಶ್ರಿತ ಕೆಂಪು ನೀರು ನದಿಯಲ್ಲಿ ಹರಿದು ಬರುತಿದೆ. ಆದರೆ ಪಯಸ್ವಿನಿ ನದಿಯು ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಬತ್ತಿ ಬರಡಾದ ಸ್ಥಿತಿಯಲ್ಲಿದ್ದು ನೀರಿನ ಬವಣೆ ಎದುರಾಗಿತ್ತು. ಇದೀಗ ಉತ್ತಮ ಮಳೆಯಾಗಿರುವ ಕಾರಣ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿ ನೀರಿನ ಬವಣೆಗೆ ದೂರವಾಗಬಹುದು ಎಂಬ ನಿರೀಕ್ಷೆ ಉಂಟಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror