ಸುಳ್ಯ: ಕಡು ಬಿಸಿಲು ಮತ್ತು ಏರಿದ ತಾಪಮಾನದಿಂದ ಬೆಂದು ಬರಡಾಗಿದ್ದ ಇಳೆಗೆ ತಂಪೆರೆದು ಸುಳ್ಯದಲ್ಲಿ ಮಳೆಯ ಸಿಂಚನ. ಮಂಗಳವಾರ ಸಂಜೆ ಒಂದು ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆ ಸುರಿದಿದೆ. ಐದು ಗಂಟೆಯ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಧಾರಾಕಾರ ಮಳೆ ಸುರಿಯಿತು.
ಸುಳ್ಯ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಳೆ ಸುರಿದು ತಂಪಾದ ವಾತಾವರಣ ಉಂಟಾಗಿದೆ. ಜೋಡುಪಾಲ, ಎರಡನೇ ಮೊಣ್ಣಂಗೇರಿ ಮತ್ತಿತರ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗಿದ್ದು ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಣ್ಣು ಮಿಶ್ರಿತ ಕೆಂಪು ನೀರು ನದಿಯಲ್ಲಿ ಹರಿದು ಬರುತಿದೆ. ಆದರೆ ಪಯಸ್ವಿನಿ ನದಿಯು ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಬತ್ತಿ ಬರಡಾದ ಸ್ಥಿತಿಯಲ್ಲಿದ್ದು ನೀರಿನ ಬವಣೆ ಎದುರಾಗಿತ್ತು. ಇದೀಗ ಉತ್ತಮ ಮಳೆಯಾಗಿರುವ ಕಾರಣ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿ ನೀರಿನ ಬವಣೆಗೆ ದೂರವಾಗಬಹುದು ಎಂಬ ನಿರೀಕ್ಷೆ ಉಂಟಾಗಿದೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…