ಸುಳ್ಯ: ಕಡು ಬಿಸಿಲು ಮತ್ತು ಏರಿದ ತಾಪಮಾನದಿಂದ ಬೆಂದು ಬರಡಾಗಿದ್ದ ಇಳೆಗೆ ತಂಪೆರೆದು ಸುಳ್ಯದಲ್ಲಿ ಮಳೆಯ ಸಿಂಚನ. ಮಂಗಳವಾರ ಸಂಜೆ ಒಂದು ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆ ಸುರಿದಿದೆ. ಐದು ಗಂಟೆಯ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಧಾರಾಕಾರ ಮಳೆ ಸುರಿಯಿತು.
ಸುಳ್ಯ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಳೆ ಸುರಿದು ತಂಪಾದ ವಾತಾವರಣ ಉಂಟಾಗಿದೆ. ಜೋಡುಪಾಲ, ಎರಡನೇ ಮೊಣ್ಣಂಗೇರಿ ಮತ್ತಿತರ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗಿದ್ದು ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಣ್ಣು ಮಿಶ್ರಿತ ಕೆಂಪು ನೀರು ನದಿಯಲ್ಲಿ ಹರಿದು ಬರುತಿದೆ. ಆದರೆ ಪಯಸ್ವಿನಿ ನದಿಯು ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಬತ್ತಿ ಬರಡಾದ ಸ್ಥಿತಿಯಲ್ಲಿದ್ದು ನೀರಿನ ಬವಣೆ ಎದುರಾಗಿತ್ತು. ಇದೀಗ ಉತ್ತಮ ಮಳೆಯಾಗಿರುವ ಕಾರಣ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿ ನೀರಿನ ಬವಣೆಗೆ ದೂರವಾಗಬಹುದು ಎಂಬ ನಿರೀಕ್ಷೆ ಉಂಟಾಗಿದೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…