ಸುಳ್ಯ: ಕಡು ಬಿಸಿಲು ಮತ್ತು ಏರಿದ ತಾಪಮಾನದಿಂದ ಬೆಂದು ಬರಡಾಗಿದ್ದ ಇಳೆಗೆ ತಂಪೆರೆದು ಸುಳ್ಯದಲ್ಲಿ ಮಳೆಯ ಸಿಂಚನ. ಮಂಗಳವಾರ ಸಂಜೆ ಒಂದು ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆ ಸುರಿದಿದೆ. ಐದು ಗಂಟೆಯ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಧಾರಾಕಾರ ಮಳೆ ಸುರಿಯಿತು.
ಸುಳ್ಯ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಳೆ ಸುರಿದು ತಂಪಾದ ವಾತಾವರಣ ಉಂಟಾಗಿದೆ. ಜೋಡುಪಾಲ, ಎರಡನೇ ಮೊಣ್ಣಂಗೇರಿ ಮತ್ತಿತರ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗಿದ್ದು ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಣ್ಣು ಮಿಶ್ರಿತ ಕೆಂಪು ನೀರು ನದಿಯಲ್ಲಿ ಹರಿದು ಬರುತಿದೆ. ಆದರೆ ಪಯಸ್ವಿನಿ ನದಿಯು ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಬತ್ತಿ ಬರಡಾದ ಸ್ಥಿತಿಯಲ್ಲಿದ್ದು ನೀರಿನ ಬವಣೆ ಎದುರಾಗಿತ್ತು. ಇದೀಗ ಉತ್ತಮ ಮಳೆಯಾಗಿರುವ ಕಾರಣ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿ ನೀರಿನ ಬವಣೆಗೆ ದೂರವಾಗಬಹುದು ಎಂಬ ನಿರೀಕ್ಷೆ ಉಂಟಾಗಿದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…