ಸುದ್ದಿಗಳು

ಸುಳ್ಯದಲ್ಲಿ ಉತ್ತಮ ಮಳೆ : ಮುಂಗಾರು ಚುರುಕಾಗುವ ಲಕ್ಷಣ

Share

ಸುಳ್ಯ: ಸುಳ್ಯದಲ್ಲಿ ಬುಧವಾರ ಬೆಳಿಗ್ಗಿನಿಂದ ಉತ್ತಮ ಮಳೆ ಸುರಿದಿದೆ. ಜೂನ್ ತಿಂಗಳಲ್ಲಿ ದುರ್ಬಲವಾಗಿದ್ದ ಮುಂಗಾರು ಮಳೆ ಜುಲೈ ಆರಂಭದಿಂದ ಚುರುಕಾಗುವ ಲಕ್ಷಣ ತೋರಿದೆ. ಮಂಗಳವಾರ ಹಗಲು ಮತ್ತು ರಾತ್ರಿ ಸಾಮಾನ್ಯ ಮಳೆಯಾಗಿತ್ತು. ಇದರಿಂದ ಮಳೆಗಾಲದ ಲಕ್ಷಣಗಳು ಗೋಚರಿಸಿದ್ದವು. ಬುಧವಾರ ಬೆಳಿಗ್ಗನಿಂದ ಮಳೆಯಾಗುವುದು ನಿರೀಕ್ಷೆ ಹುಟ್ಟಿಸಿದೆ. ಜೂನ್ ತಿಂಗಳಲ್ಲಿ ಮಳೆ ಬಾರದೇ ಇದ್ದುದು ಜನರಲ್ಲಿ ದಿಗಿಲು ಹುಟ್ಟಿಸಿತ್ತು.
ಅಪರೂಪಕ್ಕೆ ಮಾತ್ರ ಬರುವ ಹನಿ ಮಳೆ, ಕಡು ಬಿಸಿಲು, ಏರಿದ ಉಷ್ಣಾಂಶದ ವಾತಾವರಣ ಜನರನ್ನು ಕಂಗೆಡಿಸಿತ್ತು. ಇದೀಗ ಜುಲೈನಲ್ಲಿ ಮಳೆಗಾಲ ಬಲಗೊಳ್ಳುವ ಸೂಚನೆ ನೀಡಿದೆ.
ಹವಾಮಾನ ಇಲಾಖೆ ನೀಡಿದ ಎಲ್ಲಾ ಮುನ್ಸೂಚನೆಯನ್ನೂ ತಲೆ ಕೆಳಗಾಗಿಸಿ ಮಳೆಯಿಲ್ಲದ ಶತಮಾನದ ಕಠಿಣ ಜೂನ್ ತಿಂಗಳು ಮುಗಿದು ಹೋಯಿತು. ಜುಲೈನಲ್ಲಾದರೂ ಮುಂಗಾರು ತನ್ನ ವೈಭವವನ್ನು ಪ್ರದರ್ಶಿಸಬಹುದು ಎಂಬ ನಿರೀಕ್ಷೆ ಹುಟ್ಟಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

12 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

12 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

1 day ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

2 days ago