ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ನಗರ ಅಭ್ಯಾಸ ವರ್ಗವು ಸುಳ್ಯ ಎ. ಪಿ. ಎಂ. ಸಿ ಸಭಾಂಗಣದಲ್ಲಿ ನಡೆಯಿತು. ಅಭ್ಯಾಸವರ್ಗವನ್ನು ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯಶೋಧ ರಾಮಚಂದ್ರ ಉದ್ಘಾಟಿಸಿದರು.
ಬಳಿಕ ಮಾತನಾಡಿ, ರಾಷ್ಟ್ರೀಯ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿ ಪರಿಷತ್ ಒಂದಿಂಚೂ ತನ್ನ ಸಿದ್ದಾಂತವನ್ನು ಬದಲಿಸದೆ 70 ವರ್ಷದಿಂದ ದೇಶದೆಲ್ಲೆಡೆ ವಿದ್ಯಾರ್ಥಿಗಳಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.
ವೇದಿಕೆಯಲ್ಲಿ , ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ಇದರ ಅಧ್ಯಕ್ಷರಾದ ಕುಲದೀಪ್ ಪೆಲ್ತಡ್ಕ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇದರ ವಿಭಾಗ ಪ್ರಮುಖರು ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಕೇಶವ ಬಂಗೇರ ಮತ್ತು ನಗರ ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಉಪಸ್ಥಿತರಿದ್ದರು.
ವರ್ಗದ ಮೊದಲ ಅವಧಿ ಸೈದ್ಧಾಂತಿಕ ಭೂಮಿಕೆ ಯ ವಿಚಾರವಾಗಿ ಕೇಶವ ಬಂಗೇರ ಮಾತನಾಡಿದರು. ಬಳಿಕ ಅನೌಪಚಾರಿಕ ಬೈಠಕ್ ನ್ನು ಕಿಶನ್ ಜಬಳೆ ನಡೆಸಿದರು.
ಕಾರ್ಯ ಪದ್ದತಿ ಅವಧಿಯನ್ನು ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ನಡೆಸಿದರು. ವಿಶೇಷ ಭಾಷಣವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷ ಆಡಳಿತಾಧಿಕಾರಿಯಾದ ವೆಂಕಟೇಶ್ ನಡೆಸಿಕೊಟ್ಟರು.ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವ, ಪ್ರಶಿಕ್ಷಣ ಅವಧಿಯನ್ನು ವಿವೇಕಾನಂದ ಕಾಲೇಜಿ ಅಂತಿಮ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿನಿ ಮತ್ತು ಪುತ್ತೂರು ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ತೇಜಶ್ರೀ ವೆಂಕಟೇಶ್ ಇವರು ನಡೆಸಿಕೊಟ್ಟರು.
ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿಂದಿ ಶಿಕ್ಷಕಿ ನಳಿನಾಕ್ಷಿ ಕಲ್ಮಡ್ಕ ಮಾತನಾಡಿ ರಾಷ್ಟ್ರೀಯ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಇಂತಹ ಸಂಘಟನೆಗಳು ಬಹು ಪೂರಕ ಎಂದು ಹೇಳಿದರು.
ವೇದಿಕೆಯಲ್ಲಿ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ಪುತ್ತೂರು ಜಿಲ್ಲಾ ಸಂಚಾಲಕ ಮಂಜುನಾಥ್ ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುಳ್ಯ ನಗರ ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಉಪಸ್ಥಿತರಿದ್ದರು. ನಂತರ ಸುಳ್ಯ ನಗರದ 2019-20 ನೇ ನೂತನ ಕಾರ್ಯಕಾರಣಿಯನ್ನು ಘೋಷಿಸಲಾಯಿತು.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…