ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ನಗರ ಅಭ್ಯಾಸ ವರ್ಗವು ಸುಳ್ಯ ಎ. ಪಿ. ಎಂ. ಸಿ ಸಭಾಂಗಣದಲ್ಲಿ ನಡೆಯಿತು. ಅಭ್ಯಾಸವರ್ಗವನ್ನು ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯಶೋಧ ರಾಮಚಂದ್ರ ಉದ್ಘಾಟಿಸಿದರು.
ಬಳಿಕ ಮಾತನಾಡಿ, ರಾಷ್ಟ್ರೀಯ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿ ಪರಿಷತ್ ಒಂದಿಂಚೂ ತನ್ನ ಸಿದ್ದಾಂತವನ್ನು ಬದಲಿಸದೆ 70 ವರ್ಷದಿಂದ ದೇಶದೆಲ್ಲೆಡೆ ವಿದ್ಯಾರ್ಥಿಗಳಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.
ವೇದಿಕೆಯಲ್ಲಿ , ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ಇದರ ಅಧ್ಯಕ್ಷರಾದ ಕುಲದೀಪ್ ಪೆಲ್ತಡ್ಕ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇದರ ವಿಭಾಗ ಪ್ರಮುಖರು ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಕೇಶವ ಬಂಗೇರ ಮತ್ತು ನಗರ ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಉಪಸ್ಥಿತರಿದ್ದರು.
ವರ್ಗದ ಮೊದಲ ಅವಧಿ ಸೈದ್ಧಾಂತಿಕ ಭೂಮಿಕೆ ಯ ವಿಚಾರವಾಗಿ ಕೇಶವ ಬಂಗೇರ ಮಾತನಾಡಿದರು. ಬಳಿಕ ಅನೌಪಚಾರಿಕ ಬೈಠಕ್ ನ್ನು ಕಿಶನ್ ಜಬಳೆ ನಡೆಸಿದರು.
ಕಾರ್ಯ ಪದ್ದತಿ ಅವಧಿಯನ್ನು ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ನಡೆಸಿದರು. ವಿಶೇಷ ಭಾಷಣವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷ ಆಡಳಿತಾಧಿಕಾರಿಯಾದ ವೆಂಕಟೇಶ್ ನಡೆಸಿಕೊಟ್ಟರು.ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವ, ಪ್ರಶಿಕ್ಷಣ ಅವಧಿಯನ್ನು ವಿವೇಕಾನಂದ ಕಾಲೇಜಿ ಅಂತಿಮ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿನಿ ಮತ್ತು ಪುತ್ತೂರು ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ತೇಜಶ್ರೀ ವೆಂಕಟೇಶ್ ಇವರು ನಡೆಸಿಕೊಟ್ಟರು.
ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿಂದಿ ಶಿಕ್ಷಕಿ ನಳಿನಾಕ್ಷಿ ಕಲ್ಮಡ್ಕ ಮಾತನಾಡಿ ರಾಷ್ಟ್ರೀಯ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಇಂತಹ ಸಂಘಟನೆಗಳು ಬಹು ಪೂರಕ ಎಂದು ಹೇಳಿದರು.
ವೇದಿಕೆಯಲ್ಲಿ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ಪುತ್ತೂರು ಜಿಲ್ಲಾ ಸಂಚಾಲಕ ಮಂಜುನಾಥ್ ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುಳ್ಯ ನಗರ ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಉಪಸ್ಥಿತರಿದ್ದರು. ನಂತರ ಸುಳ್ಯ ನಗರದ 2019-20 ನೇ ನೂತನ ಕಾರ್ಯಕಾರಣಿಯನ್ನು ಘೋಷಿಸಲಾಯಿತು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…