Advertisement
ಸುದ್ದಿಗಳು

ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ: ಹಲವರಿಂದ ಖಗೋಳ ವಿಸ್ಮಯ ವೀಕ್ಷಣೆ

Share

ಸುಳ್ಯ: ಅಪರೂಪದ ಕಂಕಣ ಸೂರ್ಯಗ್ರಹಣ ಸುಳ್ಯದಲ್ಲಿ ಗೋಚರಿಸಿತು. ಹಲವಾರು ಮಂದಿ ಕಂಕಣ ಸೂರ್ಯಗ್ರಹಣವನ್ನು ವೀಕ್ಷಿಸಿದರು. ಮೋಡ ಅಥವಾ ಯಾವುದೇ ಅಡೆ ತಡೆ ಇಲ್ಲದೆ ಗ್ರಹಣ ಗೋಚರಿಸಿತ್ತು. ಬೆಳಿಗ್ಗೆ 8 ಗಂಟೆ 4 ನಿಮಿಷಕ್ಕೆ ಸೂರ್ಯಗ್ರಹಣ ಆರಂಭಗೊಂಡಿತು. ಸುಮಾರು 9.17ರ ವೇಳೆಗೆ ಕಂಕಣ ಸೂರ್ಯಗ್ರಹಣ ಗೋಚರಿಸಿತು. ಕೆಲ ಹೊತ್ತು ಕಂಕಣ ಸೂರ್ಯಗ್ರಹಣದ ಸ್ಥಿತಿ ಇತ್ತು‌. ಪೂರ್ಣ ಗ್ರಹಣ ಉಂಟಾದ ಸಮಯದಲ್ಲಿ ಮಬ್ಬು ಕವಿದು ಸ್ವಲ್ಪ ಸಮಯ ಕತ್ತಲಿನ ವಾತಾವರಣ ಉಂಟಾಗಿತ್ತು. 11 ಗಂಟೆಯವರೆಗೂ ಗ್ರಹಣ ಗೋಚರಿಸಿತ್ತು. ಹಲವಾರು ಮಂದಿ ಗ್ರಹಣ ದರ್ಶನ ಕನ್ನಡಕದ ಮೂಲಕ ಸೂರ್ಯಗ್ರಹಣ ವೀಕ್ಷಿಸುವುದು ಕಂಡು ಬಂದಿತ್ತು. ದೇವಸ್ಥಾನಗಳಲ್ಲಿ ಪೂಜೆಗಳು ನಡೆಯಲಿಲ್ಲ‌. ಕೆಲವು ದೇವಾಲಯಗಳಲ್ಲಿ ಗ್ರಹಣ ಶಾಂತಿ ಹೋಮವೂ ನಡೆದಿತ್ತು. ಸುಳ್ಯ ನಗರದಲ್ಲಿ ಹಲವು ಹೋಟೆಲ್ ಗಳು ಬಂದ್ ಆಗಿತ್ತು. ನಗರದಲ್ಲಿ ಜನ ಸಂಚಾರ ವಿರಳವಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

4 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

9 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

16 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

17 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

17 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago