Advertisement
ಸುದ್ದಿಗಳು

ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ: ಹಲವರಿಂದ ಖಗೋಳ ವಿಸ್ಮಯ ವೀಕ್ಷಣೆ

Share

ಸುಳ್ಯ: ಅಪರೂಪದ ಕಂಕಣ ಸೂರ್ಯಗ್ರಹಣ ಸುಳ್ಯದಲ್ಲಿ ಗೋಚರಿಸಿತು. ಹಲವಾರು ಮಂದಿ ಕಂಕಣ ಸೂರ್ಯಗ್ರಹಣವನ್ನು ವೀಕ್ಷಿಸಿದರು. ಮೋಡ ಅಥವಾ ಯಾವುದೇ ಅಡೆ ತಡೆ ಇಲ್ಲದೆ ಗ್ರಹಣ ಗೋಚರಿಸಿತ್ತು. ಬೆಳಿಗ್ಗೆ 8 ಗಂಟೆ 4 ನಿಮಿಷಕ್ಕೆ ಸೂರ್ಯಗ್ರಹಣ ಆರಂಭಗೊಂಡಿತು. ಸುಮಾರು 9.17ರ ವೇಳೆಗೆ ಕಂಕಣ ಸೂರ್ಯಗ್ರಹಣ ಗೋಚರಿಸಿತು. ಕೆಲ ಹೊತ್ತು ಕಂಕಣ ಸೂರ್ಯಗ್ರಹಣದ ಸ್ಥಿತಿ ಇತ್ತು‌. ಪೂರ್ಣ ಗ್ರಹಣ ಉಂಟಾದ ಸಮಯದಲ್ಲಿ ಮಬ್ಬು ಕವಿದು ಸ್ವಲ್ಪ ಸಮಯ ಕತ್ತಲಿನ ವಾತಾವರಣ ಉಂಟಾಗಿತ್ತು. 11 ಗಂಟೆಯವರೆಗೂ ಗ್ರಹಣ ಗೋಚರಿಸಿತ್ತು. ಹಲವಾರು ಮಂದಿ ಗ್ರಹಣ ದರ್ಶನ ಕನ್ನಡಕದ ಮೂಲಕ ಸೂರ್ಯಗ್ರಹಣ ವೀಕ್ಷಿಸುವುದು ಕಂಡು ಬಂದಿತ್ತು. ದೇವಸ್ಥಾನಗಳಲ್ಲಿ ಪೂಜೆಗಳು ನಡೆಯಲಿಲ್ಲ‌. ಕೆಲವು ದೇವಾಲಯಗಳಲ್ಲಿ ಗ್ರಹಣ ಶಾಂತಿ ಹೋಮವೂ ನಡೆದಿತ್ತು. ಸುಳ್ಯ ನಗರದಲ್ಲಿ ಹಲವು ಹೋಟೆಲ್ ಗಳು ಬಂದ್ ಆಗಿತ್ತು. ನಗರದಲ್ಲಿ ಜನ ಸಂಚಾರ ವಿರಳವಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

60 minutes ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

1 hour ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

2 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

2 hours ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

2 hours ago

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

11 hours ago