Advertisement
ಕಾರ್ಯಕ್ರಮಗಳು

ಸುಳ್ಯದಲ್ಲಿ ಕರ್ನಾಟಕ ರಾಜ್ಯೋತ್ಸವ: ಭಾಷೆಯ ಪ್ರಾಮುಖ್ಯತೆ ಅರ್ಥ ಮಾಡಿಕೊಳ್ಳಿ- ಶಾಸಕ ಅಂಗಾರ

Share

ಸುಳ್ಯ: ಭಾಷೆ ಉಳಿದರೆ ಮಾತ್ರ ಸಂಸ್ಕೃತಿ, ಜನಾಂಗ ಉಳಿಯುತ್ತದೆ. ಆದುದರಿಂದ ಭಾಷೆಯ ಮಹತ್ವವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಭಾಷೆಯನ್ನು ಹೃದಯದಲ್ಲಿರಿಸಿ ಭಾವನಾತ್ಮಕವಾಗಿ ಬೆಳೆಸಬೇಕು ಮತ್ತು ಭಾಷೆಯ ಜೊತೆ ನಾವೂ ಬೆಳೆಯಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ನಗರ ಪಂಚಾಯಿತಿ ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್, ಡೇವಿಡ್ ಧೀರಾ ಕ್ರಾಸ್ತಾ, ಪೊಲೀಸ್ ವೃತ್ತ ನಿರೀಕ್ಷಕ ಆರ್.ಸತೀಶ್‍ಕುಮಾರ್, ಉಪನಿರೀಕ್ಷಕ ಎಂ.ಆರ್.ಹರೀಶ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ, ಗೃಹರಕ್ಷಕ ದಳದ ಕಮಾಂಡೆಂಟ್, ಜಯಂತ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ, ನಗರ ಪಂಚಾಯಿತಿ ಮುಖ್ಯಾಧಿಕಾರಿ ಮತ್ತಡಿ ಮತ್ತಿತರರು ಉಪಸ್ಥಿತರಿದ್ದರು.

ನಗರದಲ್ಲಿ ಸಂಚಾರಿ ನಿಯಂತ್ರಣದಲ್ಲಿ ಕಾರ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಗೃಹ ರಕ್ಷಕ ದಳದ ಪುಷ್ಪಾವತಿ, ರಂಗ ನಿರ್ದೇಶಕ ಜೀವನ್ ರಾಂ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುಸ್ಕರಿಸಲಾಯಿತು. ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

7 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

7 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

7 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

13 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

15 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

15 hours ago