Advertisement
ಸುದ್ದಿಗಳು

ಸುಳ್ಯದಲ್ಲಿ ಕಳ್ಳನ ಕರಾಮತ್ತು : ನೋಟು ನೋಡಲು ಕೇಳಿ ಎಗರಿಸಿದ…!

Share

ಸುಳ್ಯ: ಇರಾನಿ ಮೂಲದನು ಎನ್ನಲಾದ ವ್ಯಕ್ತಿಯೊಬ್ಬ ಸುಳ್ಯದಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿ ಮಾಲಕರ ಹಣ ನಾಜೂಕಿನಿಂದ ಎಗರಿಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಸುಳ್ಯದ ಗಾಂಧಿನಗರದ ಇಲೆಕ್ಟ್ರಾನಿಕ್ಸ್ ಅಂಗಡಿಯೊಂದಕ್ಕೆ ಮಧ್ಯಾಹ್ನದ ಹೊತ್ತಿಗೆ ಇರಾನ್ ಮೂಲದ ವ್ಯಕ್ತಿಗಳು ಎನ್ನುತ್ತಾ ಆಗಮಿಸಿ ನಮ್ಮಲ್ಲಿ ಇರುವ ಇಸ್ತ್ರಿ ಪೆಟ್ಟಿಗೆ ಬದಲಾಯಿಸಿ ಮಿಕ್ಸಿ ಕೊಡುತ್ತೀರಾ ಎಂದು ವಿಚಾರಿಸಿಕೊಂಡು ಬಂದಿದ್ದರು. ನಂತರ ಭಾರತದ ದೊಡ್ಡ ನೋಟು ಯಾವುದು ಎಂದು  ಅಂಗಡಿ ಮಾಲಕರ ಬಳಿ ಆತ್ಮೀಯವಾಗಿ ಮಾತನಾಡುತ್ತಾ ಅಂಗಡಿ ಮಾಲಕರ ಬಳಿ ಇದ್ದ ನೋಟುಗಳನ್ನು ನೋಡುತ್ತಲೇ ಮಾಲಕರಿಗೆ ತಿಳಿಯಂತೆ ನೋಟುಗಳನ್ನು  ಎಗರಿಸಿದರು. 2000, 500 ಹೀಗೇ ಎಲ್ಲಾ ಬಗೆಯ ನೋಟುಗಳನ್ನು ವೀಕ್ಷಣೆ ಮಾಡುತ್ತಾ ಜೇಬಿಗೆ ನಾಜೂಕಾಗಿ ತುಂಬಿದರು. ವ್ಯಾಪಾರ ನಡೆಯದೆ ಬಳಿಕ ಹಿಂತಿರುಗಿದರು. ನಂತರ ಅಂಗಡಿ ಮಾಲಕರು ಹಣ ಎಣಿಸಿದಾಗ 33 ಸಾವಿರದಷ್ಟು ಹಣ ನಾಪತ್ತೆಯಾಗಿತ್ತು. ತಕ್ಷಣವೇ ಸಿಸಿ ಕ್ಯಾಮಾರದ ಮೂಲಕ ವಿಡಿಯೋ ಗಮನಿಸಿದಾಗ ಹಣ ಎಗರಿಸಿದ ಬಗ್ಗೆ ತಿಳಿದಿದೆ. ಈ ಸಂಬಂಧವಾಗಿ ಇದುವರೆಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

2 hours ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

13 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

17 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

1 day ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

1 day ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

2 days ago