ಸುಳ್ಯ: ಇರಾನಿ ಮೂಲದನು ಎನ್ನಲಾದ ವ್ಯಕ್ತಿಯೊಬ್ಬ ಸುಳ್ಯದಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿ ಮಾಲಕರ ಹಣ ನಾಜೂಕಿನಿಂದ ಎಗರಿಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಳ್ಯದ ಗಾಂಧಿನಗರದ ಇಲೆಕ್ಟ್ರಾನಿಕ್ಸ್ ಅಂಗಡಿಯೊಂದಕ್ಕೆ ಮಧ್ಯಾಹ್ನದ ಹೊತ್ತಿಗೆ ಇರಾನ್ ಮೂಲದ ವ್ಯಕ್ತಿಗಳು ಎನ್ನುತ್ತಾ ಆಗಮಿಸಿ ನಮ್ಮಲ್ಲಿ ಇರುವ ಇಸ್ತ್ರಿ ಪೆಟ್ಟಿಗೆ ಬದಲಾಯಿಸಿ ಮಿಕ್ಸಿ ಕೊಡುತ್ತೀರಾ ಎಂದು ವಿಚಾರಿಸಿಕೊಂಡು ಬಂದಿದ್ದರು. ನಂತರ ಭಾರತದ ದೊಡ್ಡ ನೋಟು ಯಾವುದು ಎಂದು ಅಂಗಡಿ ಮಾಲಕರ ಬಳಿ ಆತ್ಮೀಯವಾಗಿ ಮಾತನಾಡುತ್ತಾ ಅಂಗಡಿ ಮಾಲಕರ ಬಳಿ ಇದ್ದ ನೋಟುಗಳನ್ನು ನೋಡುತ್ತಲೇ ಮಾಲಕರಿಗೆ ತಿಳಿಯಂತೆ ನೋಟುಗಳನ್ನು ಎಗರಿಸಿದರು. 2000, 500 ಹೀಗೇ ಎಲ್ಲಾ ಬಗೆಯ ನೋಟುಗಳನ್ನು ವೀಕ್ಷಣೆ ಮಾಡುತ್ತಾ ಜೇಬಿಗೆ ನಾಜೂಕಾಗಿ ತುಂಬಿದರು. ವ್ಯಾಪಾರ ನಡೆಯದೆ ಬಳಿಕ ಹಿಂತಿರುಗಿದರು. ನಂತರ ಅಂಗಡಿ ಮಾಲಕರು ಹಣ ಎಣಿಸಿದಾಗ 33 ಸಾವಿರದಷ್ಟು ಹಣ ನಾಪತ್ತೆಯಾಗಿತ್ತು. ತಕ್ಷಣವೇ ಸಿಸಿ ಕ್ಯಾಮಾರದ ಮೂಲಕ ವಿಡಿಯೋ ಗಮನಿಸಿದಾಗ ಹಣ ಎಗರಿಸಿದ ಬಗ್ಗೆ ತಿಳಿದಿದೆ. ಈ ಸಂಬಂಧವಾಗಿ ಇದುವರೆಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…