ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಇದೀಗ ಪಕ್ಷಗಳ ಒಳಗೆ ಬಿಸಿ ಬಿಸಿ ಚರ್ಚೆ ಆರಂಭವಾಗಿದೆ.
ಅಭ್ಯರ್ಥಿ ಆಕಾಂಕ್ಷಿಗಾಗಿದ್ದು ಟಿಕೆಟ್ ಸಿಗದವರು ಪ್ರಮುಖ ನಾಯಕರ ಬೆಂಬಲದೊಂದಿಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಬ್ದುಲ್ ರಹಿಮಾನ್ ಮೊಗರ್ಪಣೆ 6 ನೇ ವಾರ್ಡ್ನಿಂದ, ಮಹಮ್ಮದ್ ರಿಯಾಝ್ ಕಟ್ಟೆಕ್ಕಾರ್ 13ನೇ ವಾರ್ಡ್ನಿಂದ ಮತ್ತು ಆರ್.ಕೆ.ಮಹಮ್ಮದ್ 17ನೇ ವಾರ್ಡ್ನಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವುದು ಕಾಂಗ್ರೆಸ್ಗೆ ತಲೆ ನೋವು ತಂದಿದೆ. ಇವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
10 ನೇ ವಾರ್ಡ್ನಲ್ಲಿ ಸುನಿಲ್ಕುಮಾರ್ ಕೆ.ಸಿ ಮತ್ತು 20ನೇ ವಾರ್ಡ್ನಲ್ಲಿ ಜಯಂತಿ ಆರ್ ರೈ ಪಕ್ಷೇತರರಾಗಿ ಸ್ಪರ್ಧಿಸುವುದು ಬಿಜೆಪಿಗೆ ತಲೆ ನೋವು ಸೃಷ್ಠಿಸಲಿದೆ. ಮಾಜಿ ನಗರ ಪಂಚಾಯತ್ ಅಧ್ಯಕ್ಷ ಎನ್.ಎ.ರಾಮಚಂದ್ರ ನೇತೃತ್ವದಲ್ಲಿ ಸುನಿಲ್ಕುಮಾರ್ ಮತ್ತು ಇತರ ಕಾರ್ಯಕರ್ತರು 10ನೇ ವಾರ್ಡ್ನಲ್ಲಿ ನಾಮಪತ್ರ ಸಲ್ಲಿಸಿ ಬಿಜೆಪಿಗೆ ಸಡ್ಡುಹೊಡೆದಿದ್ದಾರೆ. ಅದೇ ರೀತಿ ನಗರ ಪಂಚಾಯತ್ ಮಾಜಿ ಸದಸ್ಯ ರಮಾನಂದ ರೈ ಪತ್ನಿ ಜಯಂತಿ ಆರ್ ರೈ ನಾಮಪತ್ರ ಸಲ್ಲಿಸಿರುವುದು ಕೂಡ ಪಕ್ಷದ ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಸಂಕಷ್ಠ ತರಲಿದೆ.
ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯರಾಗಿ ಆಯ್ಕೆಯಾಗಿದ್ದ ಕೆ.ಎಸ್.ಉಮ್ಮರ್ ಈ ಬಾರಿ 17ನೇ ವಾರ್ಡ್ನಲ್ಲಿ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಎಸ್.ಡಿ.ಪಿ.ಐ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಪೈಪೋಟಿ ನೀಡಲಿದ್ದಾರೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…