Advertisement
Political mirror

ಸುಳ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಬಂಡಾಯದ ಬಿಸಿ…!

Share

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಇದೀಗ ಪಕ್ಷಗಳ ಒಳಗೆ ಬಿಸಿ ಬಿಸಿ ಚರ್ಚೆ ಆರಂಭವಾಗಿದೆ.

Advertisement
Advertisement

ಅಭ್ಯರ್ಥಿ ಆಕಾಂಕ್ಷಿಗಾಗಿದ್ದು ಟಿಕೆಟ್ ಸಿಗದವರು  ಪ್ರಮುಖ ನಾಯಕರ ಬೆಂಬಲದೊಂದಿಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಬ್ದುಲ್ ರಹಿಮಾನ್ ಮೊಗರ್ಪಣೆ 6 ನೇ ವಾರ್ಡ್‍ನಿಂದ, ಮಹಮ್ಮದ್ ರಿಯಾಝ್ ಕಟ್ಟೆಕ್ಕಾರ್ 13ನೇ ವಾರ್ಡ್‍ನಿಂದ ಮತ್ತು ಆರ್.ಕೆ.ಮಹಮ್ಮದ್ 17ನೇ ವಾರ್ಡ್‍ನಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವುದು ಕಾಂಗ್ರೆಸ್‍ಗೆ ತಲೆ ನೋವು ತಂದಿದೆ. ಇವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

Advertisement

10 ನೇ ವಾರ್ಡ್‍ನಲ್ಲಿ ಸುನಿಲ್‍ಕುಮಾರ್ ಕೆ.ಸಿ ಮತ್ತು 20ನೇ ವಾರ್ಡ್‍ನಲ್ಲಿ ಜಯಂತಿ ಆರ್ ರೈ ಪಕ್ಷೇತರರಾಗಿ ಸ್ಪರ್ಧಿಸುವುದು ಬಿಜೆಪಿಗೆ ತಲೆ ನೋವು ಸೃಷ್ಠಿಸಲಿದೆ. ಮಾಜಿ ನಗರ ಪಂಚಾಯತ್ ಅಧ್ಯಕ್ಷ ಎನ್.ಎ.ರಾಮಚಂದ್ರ ನೇತೃತ್ವದಲ್ಲಿ ಸುನಿಲ್‍ಕುಮಾರ್ ಮತ್ತು ಇತರ ಕಾರ್ಯಕರ್ತರು 10ನೇ ವಾರ್ಡ್‍ನಲ್ಲಿ ನಾಮಪತ್ರ ಸಲ್ಲಿಸಿ ಬಿಜೆಪಿಗೆ ಸಡ್ಡುಹೊಡೆದಿದ್ದಾರೆ. ಅದೇ ರೀತಿ ನಗರ ಪಂಚಾಯತ್ ಮಾಜಿ ಸದಸ್ಯ ರಮಾನಂದ ರೈ ಪತ್ನಿ ಜಯಂತಿ ಆರ್ ರೈ ನಾಮಪತ್ರ ಸಲ್ಲಿಸಿರುವುದು ಕೂಡ ಪಕ್ಷದ ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಸಂಕಷ್ಠ ತರಲಿದೆ.

ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯರಾಗಿ ಆಯ್ಕೆಯಾಗಿದ್ದ ಕೆ.ಎಸ್.ಉಮ್ಮರ್ ಈ ಬಾರಿ 17ನೇ ವಾರ್ಡ್‍ನಲ್ಲಿ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಎಸ್.ಡಿ.ಪಿ.ಐ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಪೈಪೋಟಿ ನೀಡಲಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago