MIRROR FOCUS

ಸುಳ್ಯದಲ್ಲಿ “ಕಾವೇರುತ್ತಿದೆ” ಗ್ರಾಮೀಣ ಆರ್ಥಿಕ ಶಕ್ತಿ ಕೇಂದ್ರ “ಸಹಕಾರಿ” ಚುನಾವಣೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
  • ಸಹಕಾರಿ ವಿಶ್ಲೇಷಣೆ

ಸುಳ್ಯ: ಗ್ರಾಮೀಣ ಭಾಗದ  ಆರ್ಥಿಕ ಶಕ್ತಿಯಾದ ಸಹಕಾರಿ ರಂಗದ ಚುನಾವಣೆ ನಡೆಯುತ್ತಿದೆ. ಈಗಾಗಲೇ ಕೆಲವು ಸಹಕಾರಿ ಸಂಘಗಳಲ್ಲಿ  ಅವಿರೋಧ ಆಯ್ಕೆ ನಡೆದಿದೆ. ಇನ್ನುಳಿದ ಕಡೆ ಚುನಾವಣೆ ನಡೆಯುತ್ತಿದೆ.

Advertisement

ಹಿಂದಿನಿಂದಲೂ ತಕ್ಕಮಟ್ಟಿನ ರಾಜಕೀಯ  ಇದ್ದ ಸಹಕಾರಿ ಕ್ಷೇತ್ರದಲ್ಲಿ ಈ ಬಾರಿ  ಸಾಕಷ್ಟು ರಾಜಕೀಯ ಮೇಳೈಸಿರುವುದು  ಪ್ರಮುಖ ಅಂಶವಾಗಿದೆ. ಮಡಪ್ಪಾಡಿಯಲ್ಲಿ ಕಾಂಗ್ರೆಸ್ ಬೆಂಬಲಿತರು ಮೇಲುಗೈ ಸಾಧಿಸಿದರೆ ಮರ್ಕಂಜದಲ್ಲಿ ಸಹಕಾರ ಭಾರತಿ-ಬಿಜೆಪಿ ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಉಳಿದಂತೆ ಕಲ್ಮಡ್ಕ, ಪಂಬೆತ್ತಾಡಿಯಲ್ಲಿ  ರಾಜಕೀಯ ಬದಿಗಿಟ್ಟು ಸಹಕಾರಿ ತತ್ತ್ವವನ್ನು ಪಾಲನೆ ಮಾಡಿದ್ದಾರೆ. ಕನಕಮಜಲು ಸಹಕಾರಿ ಸಂಘದಲ್ಲಿ  ಸಹಕಾರ ಭಾರತಿ-ಬಿಜೆಪಿ ಮೇಲುಗೈ ಸಾಧಿಸಿದ್ದಾರೆ. ಉಳಿದ ಕಡೆಗಳಲ್ಲಿ  ಚುನಾವಣೆ ನಡೆಯುತ್ತಿದೆ.

ಈ ಬಾರಿ ವಿಶೇಷವಾಗಿ  ಅರಂತೋಡು , ಐವರ್ನಾಡು, ಪಂಜ, ಆಲೆಟ್ಟಿ ವಿಶೇಷವಾಗಿ ಗಮನ ಸೆಳೆದಿದೆ. ಈ ಹಿಂದೆ ಸಹಕಾರ-ಭಾರತಿ ಬಿಜೆಪಿ ಬೆಂಬಲಿತರೇ ಅಧಿಕಾರ ನಡೆಸುತ್ತಿದ್ದ ಸಹಕಾರಿ ಸಂಘದಲ್ಲಿ  ಈ ಬಾರಿ ತಳಮಳವಾಗಿದೆ. ಕಳೆದ ಬಾರಿ ಡಿ ಸಿ ಸಿ ಚುನಾವಣೆಯ ಅಡ್ಡ ಮತದಾನದ ಬಳಿಕ  ಅಡ್ಡಮತದಾನ ಮಾಡಿದವರ ಪತ್ತೆ ಮಾಡುವ ದೈವದಿಂದ ದೇವರವರೆಗೆ ಮಾಡಿದ ಎಲ್ಲಾ ಪ್ರಯತ್ನಗಳೂ ಕೈಗೂಡದ ಬಳಿಕ ಈ ಬಾರಿ ಸಹಕಾರಿ ಸಂಘದ ಚುನಾವಣೆಗೆ ಡಿ ಸಿ ಸಿ ಬ್ಯಾಂಕ್ ಚುನಾವಣೆಯಲ್ಲಿ  ಭಾಗವಹಿಸಿದವರು  ಸ್ಫರ್ಧೆ ಮಾಡದಂತೆ  ಬಿಜೆಪಿ ಹಾಗೂ ಸಹಕಾರ ಭಾರತಿ ನಿರ್ಧಾರ ಕೈಗೊಂಡಿತ್ತು. ಆದರೆ ಈ ಸೂಚನೆಯನ್ನು ಪಾಲಿಸದೆ ತಂಡವಾಗಿ ಸ್ಫರ್ಧೆ ಮಾಡಲು ಇಳಿದವರನ್ನು ಈಗಾಗಲೇ ಅಧಿಕೃತ ಅಭ್ಯರ್ಥಿಯಲ್ಲ ಎಂದು ಘೋಷಣೆ ಮಾಡಿದೆ. ಹೀಗಾಗಿ ಇಲ್ಲಿ ಚುನಾವಣೆಯು ಕಾಂಗ್ರೆಸ್ ಬೆಂಬಲಿತರು ಹಾಗೂ ಸಹಕಾರ ಭಾರತಿ-ಬಿಜೆಪಿ ಬೆಂಬಲಿತರ ನಡುವೆ ಇರುವ ಬದಲು ಸ್ವಪಕ್ಷೀಯರ ನಡುವೆಯೇ ಇರುವುದು  ವಿಶೇಷವಾಗಿದೆ. ಕಾಂಗ್ರೆಸ್ ಪಕ್ಷವು ಸಹಕಾರಿ ಕ್ಷೇತ್ರದ ಕಡೆಗೆ ಹೆಚ್ಚು ಆಸಕ್ತವಾಗದೇ ಇರುವುದು , ಸೂಕ್ತ ಅಭ್ಯರ್ಥಿಗಳ ಕೊರತೆ ಇರುವುದರಿಂದ ಬಿಜೆಪಿ-ಸಹಕಾರ ಭಾರತಿಯ ಒಳಜಗಳದ  ಲಾಭ ಪಡೆಯಲು ಶಕ್ತವಾಗುತ್ತಿಲ್ಲ.

ಮುರುಳ್ಯ-ಎಣ್ಮೂರು, ಹರಿಹರ ಪಲ್ಲತ್ತಡ್ಕ ಸಹಕಾರಿ ಸಂಘ , ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್, ಬೆಳ್ಳಾರೆ ಸಹಕಾರಿ ಸಂಘ,  ಸುಬ್ರಹ್ಮಣ್ಯ-ಐನೆಕಿದು ಸಹಕಾರಿ ಸಂಘದಲ್ಲಿ  ಚುನಾವಣೆ ನಡೆಯುತ್ತಿದೆ. ಐವರ್ನಾಡು  ಸಹಕಾರಿ ಸಂಘದ ಚುನಾವಣೆಗೂ ಮುನ್ನವೇ 4 ಮಂದಿ ಅವಿರೋಧ ಆಯ್ಕೆಯಾಗಿದ್ದಾರೆ.

Advertisement

ಸಹಕಾರಿ ಸಂಘದ ಚುನಾವಣೆಯ ಬಳಿಕ ಗ್ರಾಮ ಪಂಚಾಯತ್ ಚುನಾವಣೆಯೂ ಬರಲಿದೆ. ಹೀಗಾಗಿ ರಾಜಕೀಯ ಲೆಕ್ಕಾಚಾರಗಳು ಈಗ ಆರಂಭವಾಗಿದೆ.

Advertisement

ಸಹಕಾರಿ ಕ್ಷೇತ್ರವು ಪ್ರತೀ ಗ್ರಾಮದ ಕೃಷಿಕರ ಹಾಗೂ ಗ್ರಾಮದ ಜನರ ಆರ್ಥಿಕ ಶಕ್ತಿ. ಗ್ರಾಮದ ಅಭಿವೃದ್ಧಿಗೆ ಕೂಡಾ ಸಹಕಾರಿ ಸಂಘದ ಕೊಡುಗೆ ಅಪಾರವಿದೆ. ಹೀಗಾಗಿ ಸಹಕಾರಿ ಕ್ಷೇತ್ರದಲ್ಲಿ  ಸ್ಫರ್ಧೆ ಮಾಡುವ ವ್ಯಕ್ತಿಗಳು ರಾಜಕೀಯ ರಹಿತವಾಗಿ, ಪ್ರಾಮಾಣಿಕತೆ, ಸಹಕಾರಿ ಮನೋಭಾವ, ಆರ್ಥಿಕ  ವ್ಯವಹಾರದಲ್ಲಿ  ಶುದ್ಧತೆ ಇರಬೇಕು . ಇಲ್ಲಿ ಸಹಕಾರಿ ಮನೋಭಾವ ಮುಖ್ಯ ರಾಜಕೀಯಕ್ಕೆ ಎರಡನೇ ಸ್ಥಾನ  ಎಂಬುದು ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ ಕಾಲದಿಂದಲೂ ನಡೆದುಕೊಂಡು ಬಂದಿರುವ ಅಲಿಖಿತ ಸಿದ್ಧಾಂತ. ಈಚೆಗೆ ಈ ಸಿದ್ಧಾಂತಗಳು ಬದಲಾಗಿ ಅಧಿಕಾರ ಮುಖ್ಯವಾಗುತ್ತಿದೆ.  ಸಹಕಾರಿ ಸಂಘದ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಸಾಲ ಮರುಪಾವತಿ ಮಾಡದೇ ಇರುವುದೇ ಅಧಿಕಾರ ಎಂದೂ ಭಾವಿಸಲಾಗುತ್ತಿದೆ.  ಹೀಗಾಗಿ ಸಹಕಾರಿ ಕ್ಷೇತ್ರ ಈ ಹಂತದಲ್ಲಿ ಬಲಿಷ್ಟ ಹಾಗೂ ಉತ್ತಮಗೊಳ್ಳಲು ಪಕ್ಷಗಳು, ಸಂಘಟನೆಗಳು ಕಳಂಕ ರಹಿತ ಅಭ್ಯರ್ಥಿಗಳನ್ನು  ಕಣಕ್ಕೆ ಇಳಿಸಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

3 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

4 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

12 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

14 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

15 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

21 hours ago