ಸುಳ್ಯ: ದೇಶವು ಅತ್ಯಂತ ವೇಗವಾಗಿ ಬೆಳೆಯುತಿದೆ. ದೇಶವು ವಿಶ್ವಕ್ಕೆ ಮಾದರಿಯಾಗುವ ನೆಲೆಯಲ್ಲಿ ಬೆಳವಣಿಗೆಯಾಗಲು ಎಲ್ಲರೂ ಕೊಡುಗೆ ನೀಡಬೇಕು, ಪ್ರತಿಯೊಬ್ಬರೂ ದೇಶಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಎಸ್.ಅಂಗಾರ ಕರೆ ನೀಡಿದ್ದಾರೆ. ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಅಹಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿ ನಮ್ಮ ಸಂವಿಧಾನ ಜಗತ್ತಿನ ಅತ್ಯಂತ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡಿದೆ. ದೇಶದಲ್ಲಿ ಹುಟ್ಟಿದ ಎಲ್ಲರೂ ಪರಸ್ಪರ ಪ್ರೀತಿಯಿಂದ, ಗೌರವದಿಂದ, ಸಹಕಾರದಿಂದ, ಸಹಬಾಳ್ವೆಯಿಂದ ಬದುಕುವ ಅಗತ್ಯವಿದೆ. ನಮ್ಮ ಸಂವಿಧಾನದ ಆಶಯ ಮತ್ತು ಬದುಕು ಅದೇ ಆಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಪೊಲೀಸ್ ವೃತ್ತ ನಿರೀಕ್ಷಕ ನವೀನ್ಚಂದ್ರ ಜೋಗಿ ಮೊದಲಾದವರು ಉಪಸ್ಥಿತರಿದ್ದರು. ಸಮಾರಂಭಕ್ಕೆ ಮುನ್ನ ಆಕರ್ಷಕ ಪಥ ಸಂಚಲನ ನಡೆಯಿತು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…