ಸುಳ್ಯ : ಪ್ರಕೃತಿಯೇ ನಮಗೆ ಗುರು .ಆದರಿಂದ ನಾವು ಅನೇಕ ಪಾಠಕಲಿಯಬಹುದು.ಕಾಗೆ ಆಹಾರ ಕಂಡೊಡನೆ ತನ್ನೆಲ್ಲ ಬಳಗವನ್ನು ಕರೆಯುವ ಸಂಘಟನೆಯ ಪಾಠ . ಇರುವೆಯಿಂದ ಶಿಸ್ತು. ನಾಯಿಂದ ನಿಷ್ಠೆ ಹೀಗೆ ಹತ್ತಾರು ಮೌಲ್ಯಗಳು ಪ್ರಕೃತಿ ನೀಡುತ್ತಿದೆ . ಜಗತ್ತಿಗೆ ವೇದ, ಯೋಗ, ಜ್ಞಾನ, ತಂತ್ರಜ್ಞಾನವನ್ನು ಪರಿಚಯಿಸಿದ ದೇಶ ಭಾರತ ಎಂದು ಮಂಗಳೂರು ವಿಭಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೌದ್ಧಿಕ್ ಪ್ರಮುಖ್ ರಾಜೇಶ್ ಯಂ. ತಿಳಿಸಿದರು.
ಅವರು ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಸುಳ್ಯ ನಗರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಶ್ರಯದಲ್ಲಿ ನಡೆದ ಶ್ರೀಗುರು ಪೂಜಾ ಉತ್ಸವದಲ್ಲಿ ಬೌದ್ಧಿಕ್ ನೀಡಿದರು.
ಸಭಾಧ್ಯಕ್ಷತೆಯನ್ನು ನಿವೃತ್ತ ಪ್ರಾಂಶುಪಾಲ ಪ್ರೊ| ಕೆ.ವಿ.ದಾಮೋದರ ಗೌಡ ವಹಿಸಿ, ವಿವೇಕವಿಲ್ಲದ ಜ್ಞಾನ ಸಮಾಜಕ್ಕೆ ಅಪಾಯಕಾರಿ ಹೆಚ್ಚು ಹೆಚ್ಚು ಕಲಿತಂತೆ ನಮ್ಮಲ್ಲಿ ಆಂತರಿಕ ಪರಿವರ್ತನೆಯಾಗಿ ಕಲಿತ ವಿದ್ಯೆ ಸಾರ್ಥಕಗೊಳ್ಳಬೇಕು. ಗುರು ಪೂರ್ಣಿಮೆ ಗುರು ಶಿಷ್ಯರ ಅನುಸಂಧಾನ ಎಂದರು.
ಸುಳ್ಯ ತಾಲೂಕು ಸಂಘಚಾಲಕ ಚಂದ್ರಶೇಖರ ತಳೂರು ವೇದಿಕೆಯಲ್ಲಿದ್ದರು. ನೂರಾರು ಸ್ವಯಂಸೇವಕರು ಭಾಗವಹಿಸಿ ಗುರುವಂದನೆ ಸಲ್ಲಿಸಿದರು. ಸತೀಶ ಕಾಟೂರು, ರಾಜೇಶ್ ಮೇನಾಲ, ಸುದರ್ಶನ ಸೂರ್ತಿಲ ಮೊದಲಾದವರು ಸಹಕರಿಸಿದರು.
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…