Advertisement

ಸುಳ್ಯದಲ್ಲಿ ನಳಿನ್ ರೋಡ್ ಶೋ

Share

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್ ಸುಳ್ಯದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿ ಅಬ್ಬರದ ಚುನಾವಣಾ ಪ್ರಚಾರ ಕೈಗೊಂಡರು.
ನಗರದ ಜ್ಯೋತಿ ವೃತ್ತದಿಂದ ಆರಂಭಗೊಂಡ ರೋಡ್ ಶೋದಲ್ಲಿ ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್ ಮತ್ತು ಬಿಜೆಪಿ ನಾಯಕರು, ನೂರಾರು ಮಂದಿ ಮಹಿಳೆಯರು, ಕಾರ್ಯಕರ್ತರು ಭಾಗವಹಿಸಿದರು. ನಗರದ ಮುಖ್ಯ ರಸ್ಥೆಯಲ್ಲಿ ಸಾಗಿದ ರೋಡ್ ಶೋ ಶ್ರೀರಾಂ ಪೇಟೆ, ಬಸ್, ನಿಲ್ದಾಣದ ಮೂಲಕ ಗಾಂಧೀನಗರದ ವರೆಗೆ ತೆರಳಿ ಅಲ್ಲಿಂದ ಹಿಂತಿರುಗಿ ಬಂದು ನಗರದ ಬಸ್ ನಿಲ್ದಾಣದ ಬಳಿಯಲ್ಲಿ ಸಮಾವೇಶಗೊಂಡಿತು.
ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್, ಶಾಸಕ ಎಸ್.ಅಂಗಾರ ಮತ್ತಿತರ ನಾಯಕರು ಮತ್ತು ಮಹಿಳೆಯರೂ ಸೇರಿದ ಕಾರ್ಯಕರ್ತರು ಕೇಸರಿ ಪೇಟ ಧರಿಸಿ ಗಮನ ಸೆಳೆದರು. ಕೇರಳದ ಚೆಂಡೆ ಮೇಳದ ಅಬ್ಬರಕ್ಕೆ ಮೋದಿ ಮೋದಿ ಘೋಷಣೆ ರೋಡ್ ಶೋಗೆ ಸಾಥ್ ನೀಡಿದವು.
ಶಾಸಕ ಎಸ್.ಅಂಗಾರ, ಮಾಜಿ ಸಚಿವ ಕೃಷ್ಣ ಪಾಲೆಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರು, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಶ್ ಕಣೆಮರಡ್ಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಭಾಗೀರಥಿ ಮುರುಳ್ಯ, ವೆಂಕಟ್ ದಂಬೆಕೋಡಿ, ಮತ್ತಿತರರು ಉಪಸ್ಥಿತರಿದ್ದರು. ರೋಡ್ ಶೋ ಆರಂಭಕ್ಕೆ ಮುನ್ನ ನಳಿನ್‍ಕುಮಾರ್ ಕಟೀಲು, ಶಾಸಕ ಎಸ್.ಅಂಗಾರ ಮತ್ತಿತರರು ನಗರದ ಕಲ್ಕುಡ ದೈವಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

31 minutes ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

13 hours ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

13 hours ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

14 hours ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

22 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

1 day ago