Advertisement

ಸುಳ್ಯದಲ್ಲಿ ನಳಿನ್ ರೋಡ್ ಶೋ

Share

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್ ಸುಳ್ಯದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿ ಅಬ್ಬರದ ಚುನಾವಣಾ ಪ್ರಚಾರ ಕೈಗೊಂಡರು.
ನಗರದ ಜ್ಯೋತಿ ವೃತ್ತದಿಂದ ಆರಂಭಗೊಂಡ ರೋಡ್ ಶೋದಲ್ಲಿ ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್ ಮತ್ತು ಬಿಜೆಪಿ ನಾಯಕರು, ನೂರಾರು ಮಂದಿ ಮಹಿಳೆಯರು, ಕಾರ್ಯಕರ್ತರು ಭಾಗವಹಿಸಿದರು. ನಗರದ ಮುಖ್ಯ ರಸ್ಥೆಯಲ್ಲಿ ಸಾಗಿದ ರೋಡ್ ಶೋ ಶ್ರೀರಾಂ ಪೇಟೆ, ಬಸ್, ನಿಲ್ದಾಣದ ಮೂಲಕ ಗಾಂಧೀನಗರದ ವರೆಗೆ ತೆರಳಿ ಅಲ್ಲಿಂದ ಹಿಂತಿರುಗಿ ಬಂದು ನಗರದ ಬಸ್ ನಿಲ್ದಾಣದ ಬಳಿಯಲ್ಲಿ ಸಮಾವೇಶಗೊಂಡಿತು.
ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್, ಶಾಸಕ ಎಸ್.ಅಂಗಾರ ಮತ್ತಿತರ ನಾಯಕರು ಮತ್ತು ಮಹಿಳೆಯರೂ ಸೇರಿದ ಕಾರ್ಯಕರ್ತರು ಕೇಸರಿ ಪೇಟ ಧರಿಸಿ ಗಮನ ಸೆಳೆದರು. ಕೇರಳದ ಚೆಂಡೆ ಮೇಳದ ಅಬ್ಬರಕ್ಕೆ ಮೋದಿ ಮೋದಿ ಘೋಷಣೆ ರೋಡ್ ಶೋಗೆ ಸಾಥ್ ನೀಡಿದವು.
ಶಾಸಕ ಎಸ್.ಅಂಗಾರ, ಮಾಜಿ ಸಚಿವ ಕೃಷ್ಣ ಪಾಲೆಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರು, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಶ್ ಕಣೆಮರಡ್ಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಭಾಗೀರಥಿ ಮುರುಳ್ಯ, ವೆಂಕಟ್ ದಂಬೆಕೋಡಿ, ಮತ್ತಿತರರು ಉಪಸ್ಥಿತರಿದ್ದರು. ರೋಡ್ ಶೋ ಆರಂಭಕ್ಕೆ ಮುನ್ನ ನಳಿನ್‍ಕುಮಾರ್ ಕಟೀಲು, ಶಾಸಕ ಎಸ್.ಅಂಗಾರ ಮತ್ತಿತರರು ನಗರದ ಕಲ್ಕುಡ ದೈವಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

15 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago