ಸುಳ್ಯ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ನೆಹರೂ ಸ್ಮಾರಕ ಕಾಲೇಜಿನಲ್ಲಿ ಗುರುವಾರ ನಡೆದ ಪದವಿಪೂರ್ವ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮಂಗಳೂರು ನಗರವನ್ನು ಪ್ರತಿನಿಧಿಸಿದ ವಿಕಾಸ್ ಕಾಲೇಜು ಮಂಗಳೂರು ಮತ್ತು ಬಾಲಕಿಯರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರನ್ನು ಪ್ರತಿನಿಧಿಸಿದ ಮೂಡಬಿದ್ರೆಯ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿ ಹೊರ ಹೊಮ್ಮಿತು.
ಬಾಲಕರ ವಿಭಾಗದಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ಉಪ್ಪಿನಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ, ಬಂಟ್ವಾಳ ತಾಲೂಕಿನ ಕಾರ್ಮೆಲ್ ಪದವಿಪೂರ್ವ ಕಾಲೇಜು ತೃತೀಯ ಮತ್ತು ಮಂಗಳೂರು ಗ್ರಾಮಾಂತರವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ಮೂಡಬಿದ್ರೆ ಚತುರ್ಥ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್ಡಿಎಂ ಕಾಲೇಜು ದ್ವಿತೀಯ ಸ್ಥಾನ, ಮಂಗಳೂರು ನಗರದ ವಿಕಾಸ್ ಕಾಲೇಜು ತೃತೀಯ ಮತ್ತು ಸುಳ್ಯ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಚತುರ್ಥ ಸ್ಥಾನ ಪಡೆದುಕೊಂಡಿತು.
ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಬಾಲಚಂದ್ರ ಗೌಡ ವಿಜೇತರಿಗೆ ಬಹುಮಾನ ವಿತರಿಸಿದದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ, ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೆಮನಾಥ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೆಕಲ್ಲು ಸ್ವಾಗತಿಸಿ, ಉಪನ್ಯಾಸಕ ಹರೀಶ್ ವಂದಿಸಿದರು. ಉಪನ್ಯಾಸಕಿ ಪಿ.ಬಿ.ಬೇಬಿವಿದ್ಯಾ ಕಾರ್ಯಕ್ರಮ ನಿರೂಪಿಸಿದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…