Advertisement
ಸುದ್ದಿಗಳು

ಸುಳ್ಯದಲ್ಲಿ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ : ವಿಕಾಸ್ ಕಾಲೇಜು ಮಂಗಳೂರು, ಆಳ್ವಾಸ್ ಮೂಡಬಿದ್ರೆ ಮೂಡಬಿದ್ರೆ ಚಾಂಪಿಯನ್

Share

ಸುಳ್ಯ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ನೆಹರೂ ಸ್ಮಾರಕ ಕಾಲೇಜಿನಲ್ಲಿ ಗುರುವಾರ ನಡೆದ ಪದವಿಪೂರ್ವ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮಂಗಳೂರು ನಗರವನ್ನು ಪ್ರತಿನಿಧಿಸಿದ ವಿಕಾಸ್ ಕಾಲೇಜು ಮಂಗಳೂರು ಮತ್ತು ಬಾಲಕಿಯರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರನ್ನು ಪ್ರತಿನಿಧಿಸಿದ ಮೂಡಬಿದ್ರೆಯ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿ ಹೊರ ಹೊಮ್ಮಿತು.

Advertisement

ಬಾಲಕರ ವಿಭಾಗದಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ಉಪ್ಪಿನಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ, ಬಂಟ್ವಾಳ ತಾಲೂಕಿನ ಕಾರ್ಮೆಲ್ ಪದವಿಪೂರ್ವ ಕಾಲೇಜು ತೃತೀಯ ಮತ್ತು ಮಂಗಳೂರು ಗ್ರಾಮಾಂತರವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ಮೂಡಬಿದ್ರೆ ಚತುರ್ಥ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್‍ಡಿಎಂ ಕಾಲೇಜು ದ್ವಿತೀಯ ಸ್ಥಾನ, ಮಂಗಳೂರು ನಗರದ ವಿಕಾಸ್ ಕಾಲೇಜು ತೃತೀಯ ಮತ್ತು ಸುಳ್ಯ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಚತುರ್ಥ ಸ್ಥಾನ ಪಡೆದುಕೊಂಡಿತು.


ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಬಾಲಚಂದ್ರ ಗೌಡ ವಿಜೇತರಿಗೆ ಬಹುಮಾನ ವಿತರಿಸಿದದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ, ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೆಮನಾಥ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೆಕಲ್ಲು ಸ್ವಾಗತಿಸಿ, ಉಪನ್ಯಾಸಕ ಹರೀಶ್ ವಂದಿಸಿದರು. ಉಪನ್ಯಾಸಕಿ ಪಿ.ಬಿ.ಬೇಬಿವಿದ್ಯಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

4 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

11 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

11 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

12 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

12 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

21 hours ago