Advertisement
ಸುದ್ದಿಗಳು

ಸುಳ್ಯದಲ್ಲಿ ಪ್ಲಾಸ್ಟಿಕ್ ನಿರ್ಮೂಲನಾ ಜಾಗೃತಿ ಜಾಥಾ

Share

ಸುಳ್ಯ: ಸ್ವಚ್ಛ ಸುಳ್ಯ ತಂಡ ಮತ್ತು ಹೈ ಟೊರ್ಕ್ ಮೊಟೊ ಕ್ರೆವ್ ಗ್ರೂಪ್ ಸಹಭಾಗಿತ್ವದಲ್ಲಿ ನಗರದ ಪ್ಲಾಸ್ಟಿಕ್ ತ್ಯಾಜ್ಯವನ್ನು ಶೋಧಿಸಿ ವಿಲೇವಾರಿ ಮಾಡುವ ವಿಭಿನ್ನ‌ ರೀತಿಯ ಪ್ಲಾಸ್ಟಿಕ್ ನಿರ್ಮೂಲನಾ ಜಾಥಾ ಸುಳ್ಯ ನಗರದಲ್ಲಿ ನಡೆಯಿತು.

ಚೆನ್ನಕೇಶವ ದೇವಾಲಯದ ಆವರಣದಿಂದ ಆರಂಭಗೊಂಡ ದ್ವಿಚಕ್ರ ವಾಹನ ಜಾಥಾಕ್ಕೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಚಾಲನೆ ನೀಡಿದರು. ಸುಮಾರು 50 ಕ್ಕಿಂತ ಹೆಚ್ಚಿನ ಬೈಕ್ ಸವಾರರು ಸುಳ್ಯ ನಗರದ ಎಲ್ಲಾ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ದಾರಿಯುದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್ ಗಳನ್ನು ಹೆಕ್ಕಿ ತಂದು ವಿಲೇವಾರಿ ಮಾಡುವ ಮೂಲಕ ಜನರಲ್ಲಿ ಮುಂದೆ ಪ್ಲಾಸ್ಟಿಕ್ ಉಪಯೋಗಿಸಬೇಡಿ ಎಂದು ಜಾಗೃತಿ ಮೂಡಿಸುವ ವಿಭಿನ್ನ ರೀತಿಯ ಚಳುವಳಿ ಇದಾಗಿತ್ತು. ಸುಳ್ಯ ನಗರದಲ್ಲಿ ಆ.15 ರಿಂದ ಸುಳ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬರಲಿದ್ದು ಈ ಹಿನ್ನಲೆಯಲ್ಲಿ

ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುವ ಪರಿಸರ ಹಾನಿಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚೆನ್ನಕೇಶವ ದೇವಸ್ಥಾನದಿಂದ ಪ್ರಾರಂಭಗೊಂಡು, ಸುಳ್ಯ ನಗರದಾದ್ಯಂತ ಸಂಚರಿಸಿ ಪ್ಲಾಸ್ಟಿಕ್ ಕಸ ಸಂಗ್ರಹಿಸಲಾಯಿತು.

ಸುಳ್ಯ ಎಸ್ಐ ಎಂ.ಆರ್.ಹರೀಶ್, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಸ್ವಚ್ಛ ನಗರ ಸುಳ್ಯ ತಂಡದ ವಿನೋದ್ ಲಸ್ರಾದೋ, ಲೋಕೇಶ್ ಗುಡ್ಡೆಮನೆ, ಡಿ.ಎಸ್. ಗಿರೀಶ್, ಕೆ.ಆರ್. ಮನಮೋಹನ್, ಸುಂದರ ರಾವ್, ನ.ಪಂ. ಸದಸ್ಯರಾದ ಶರೀಪ್ ಕಂಠಿ, ಬುದ್ಧ ನಾಯ್ಕ, ರೋಟರಿ ಕ್ಲಬ್‌ನ ರಾಮಚಂದ್ರ ಪಿ, ಡಿ.ಎಂ.ಶಾರೀಖ್, ನ.ಪಂ. ಆರೋಗ್ಯಾಧಿಕಾರಿ ರವಿಕೃಷ್ಣ, ಯುವ ಬ್ರಿಗೇಡ್‌ನ ಶರತ್ ಪರಿವಾರ್, ಹೈ ಟೊರ್ಕ್ ಮೊಟೊ ಕ್ರೆವ್ ಗ್ರೂಪ್‌ನ ಮಯೂರ್, ಕೌಶಲ್, ದೀಕ್ಷಿತ್ ರಾವ್, ಸಂಪ್ರೀತ್, ಸಚಿನ್, ಸನತ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

6 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

7 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

17 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

17 hours ago