ಸುಳ್ಯ: ಸ್ವಚ್ಛ ಸುಳ್ಯ ತಂಡ ಮತ್ತು ಹೈ ಟೊರ್ಕ್ ಮೊಟೊ ಕ್ರೆವ್ ಗ್ರೂಪ್ ಸಹಭಾಗಿತ್ವದಲ್ಲಿ ನಗರದ ಪ್ಲಾಸ್ಟಿಕ್ ತ್ಯಾಜ್ಯವನ್ನು ಶೋಧಿಸಿ ವಿಲೇವಾರಿ ಮಾಡುವ ವಿಭಿನ್ನ ರೀತಿಯ ಪ್ಲಾಸ್ಟಿಕ್ ನಿರ್ಮೂಲನಾ ಜಾಥಾ ಸುಳ್ಯ ನಗರದಲ್ಲಿ ನಡೆಯಿತು.
ಚೆನ್ನಕೇಶವ ದೇವಾಲಯದ ಆವರಣದಿಂದ ಆರಂಭಗೊಂಡ ದ್ವಿಚಕ್ರ ವಾಹನ ಜಾಥಾಕ್ಕೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಚಾಲನೆ ನೀಡಿದರು. ಸುಮಾರು 50 ಕ್ಕಿಂತ ಹೆಚ್ಚಿನ ಬೈಕ್ ಸವಾರರು ಸುಳ್ಯ ನಗರದ ಎಲ್ಲಾ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ದಾರಿಯುದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್ ಗಳನ್ನು ಹೆಕ್ಕಿ ತಂದು ವಿಲೇವಾರಿ ಮಾಡುವ ಮೂಲಕ ಜನರಲ್ಲಿ ಮುಂದೆ ಪ್ಲಾಸ್ಟಿಕ್ ಉಪಯೋಗಿಸಬೇಡಿ ಎಂದು ಜಾಗೃತಿ ಮೂಡಿಸುವ ವಿಭಿನ್ನ ರೀತಿಯ ಚಳುವಳಿ ಇದಾಗಿತ್ತು. ಸುಳ್ಯ ನಗರದಲ್ಲಿ ಆ.15 ರಿಂದ ಸುಳ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬರಲಿದ್ದು ಈ ಹಿನ್ನಲೆಯಲ್ಲಿ
ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುವ ಪರಿಸರ ಹಾನಿಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚೆನ್ನಕೇಶವ ದೇವಸ್ಥಾನದಿಂದ ಪ್ರಾರಂಭಗೊಂಡು, ಸುಳ್ಯ ನಗರದಾದ್ಯಂತ ಸಂಚರಿಸಿ ಪ್ಲಾಸ್ಟಿಕ್ ಕಸ ಸಂಗ್ರಹಿಸಲಾಯಿತು.
ಸುಳ್ಯ ಎಸ್ಐ ಎಂ.ಆರ್.ಹರೀಶ್, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಸ್ವಚ್ಛ ನಗರ ಸುಳ್ಯ ತಂಡದ ವಿನೋದ್ ಲಸ್ರಾದೋ, ಲೋಕೇಶ್ ಗುಡ್ಡೆಮನೆ, ಡಿ.ಎಸ್. ಗಿರೀಶ್, ಕೆ.ಆರ್. ಮನಮೋಹನ್, ಸುಂದರ ರಾವ್, ನ.ಪಂ. ಸದಸ್ಯರಾದ ಶರೀಪ್ ಕಂಠಿ, ಬುದ್ಧ ನಾಯ್ಕ, ರೋಟರಿ ಕ್ಲಬ್ನ ರಾಮಚಂದ್ರ ಪಿ, ಡಿ.ಎಂ.ಶಾರೀಖ್, ನ.ಪಂ. ಆರೋಗ್ಯಾಧಿಕಾರಿ ರವಿಕೃಷ್ಣ, ಯುವ ಬ್ರಿಗೇಡ್ನ ಶರತ್ ಪರಿವಾರ್, ಹೈ ಟೊರ್ಕ್ ಮೊಟೊ ಕ್ರೆವ್ ಗ್ರೂಪ್ನ ಮಯೂರ್, ಕೌಶಲ್, ದೀಕ್ಷಿತ್ ರಾವ್, ಸಂಪ್ರೀತ್, ಸಚಿನ್, ಸನತ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…