ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಗಾಂಧಿ ಸಂಕಲ್ಪ ಯಾತ್ರೆ ನಡೆಯಿತು. ಸುಳ್ಯದ ಪೈಚಾರ್ ಮತ್ತು ಅರಂಬೂರಿನಿಂದ ಏಕ ಕಾಲದಲ್ಲಿ ಗಾಂಧಿ ಸಂಕಲ್ಪ ಪಾದಯಾತ್ರೆ ಆರಂಭಗೊಂಡಿತು.
ಶಾಸಕ ಎಸ್.ಅಂಗಾರ ಪೈಚಾರ್ ನಲ್ಲಿ ಗಾಂಧಿ ಯಾತ್ರೆಗೆ ಚಾಲನೆ ನೀಡಿದರು. ಎರಡೂ ಕಡೆಯಿಂದ ಪಾದಯಾತ್ರೆ ನಗರದ ರಥಬೀದಿಯಲ್ಲಿ ಸಂಗಮಿಸಿ ಕೇರ್ಪಳದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಸಮಾಪನಗೊಂಡಿತು. ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಗಾಂಧಿ ಟೋಪಿ ಧರಿಸಿ ರಾಷ್ಟ್ರ ಧ್ವಜ ಹಿಡಿದು ಪಾದಯಾತ್ರೆಯಲ್ಲಿ ಪಾಲ್ಗೊಂಡರು.
ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಬಿಜೆಪಿ ವತಿಯಿಂದ ರಾಷ್ಟ್ರದಾದ್ಯಂತ ನಡೆಯುತ್ತಿರುವ ಗಾಂಧಿ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಯಕ್ರಮ ನಡೆಯಿತು. ಗಾಂಧೀಜಿಯರ ಆದರ್ಶ ಮೈಗೂಡಿಸಿಕೊಳ್ಳಲು ಮತ್ತು ಗ್ರಾಮ ಸ್ವರಾಜ್ಯದ ಕಲ್ಪನೆಯ ಸಾಕಾರಕ್ಕಾಗಿ ಗಾಂಧಿ ಸಂಕಲ್ಪ ಯಾತ್ರೆ ನಡೆಸಲಾಯಿತು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…