ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಗಾಂಧಿ ಸಂಕಲ್ಪ ಯಾತ್ರೆ ನಡೆಯಿತು. ಸುಳ್ಯದ ಪೈಚಾರ್ ಮತ್ತು ಅರಂಬೂರಿನಿಂದ ಏಕ ಕಾಲದಲ್ಲಿ ಗಾಂಧಿ ಸಂಕಲ್ಪ ಪಾದಯಾತ್ರೆ ಆರಂಭಗೊಂಡಿತು.
ಶಾಸಕ ಎಸ್.ಅಂಗಾರ ಪೈಚಾರ್ ನಲ್ಲಿ ಗಾಂಧಿ ಯಾತ್ರೆಗೆ ಚಾಲನೆ ನೀಡಿದರು. ಎರಡೂ ಕಡೆಯಿಂದ ಪಾದಯಾತ್ರೆ ನಗರದ ರಥಬೀದಿಯಲ್ಲಿ ಸಂಗಮಿಸಿ ಕೇರ್ಪಳದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಸಮಾಪನಗೊಂಡಿತು. ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಗಾಂಧಿ ಟೋಪಿ ಧರಿಸಿ ರಾಷ್ಟ್ರ ಧ್ವಜ ಹಿಡಿದು ಪಾದಯಾತ್ರೆಯಲ್ಲಿ ಪಾಲ್ಗೊಂಡರು.
ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಬಿಜೆಪಿ ವತಿಯಿಂದ ರಾಷ್ಟ್ರದಾದ್ಯಂತ ನಡೆಯುತ್ತಿರುವ ಗಾಂಧಿ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಯಕ್ರಮ ನಡೆಯಿತು. ಗಾಂಧೀಜಿಯರ ಆದರ್ಶ ಮೈಗೂಡಿಸಿಕೊಳ್ಳಲು ಮತ್ತು ಗ್ರಾಮ ಸ್ವರಾಜ್ಯದ ಕಲ್ಪನೆಯ ಸಾಕಾರಕ್ಕಾಗಿ ಗಾಂಧಿ ಸಂಕಲ್ಪ ಯಾತ್ರೆ ನಡೆಸಲಾಯಿತು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…